ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಜಯಚಂದ್ರನ್ ಅವರು, ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪ್ರೀತಿ, ಹಂಬಲ, ಭಕ್ತಿ ಸೇರಿದಂತೆ ಮುಂತಾದ ಪ್ರತಿಯೊಂದು ಭಾವನೆಯನ್ನು ತಮ್ಮ ಗಾಯನದ ಮೂಲಕ ಜನರನ್ನು ರಂಜಿಸುತ್ತಾ ಬಂದಿದ್ದರು.
ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 16,000ಕ್ಕೂ ಹೆಚ್ಚು ಹಾಡುಗಳಿಗೆ ತಮ್ಮ ಧ್ವನಿ ನೀಡಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ಪ್ರಸಿದ್ಧ ಧ್ವನಿಗಳಲ್ಲಿ ಒಂದಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
ಮಂದಾರ ಪುಷ್ಪವೂ ನೀನು, ಭೂಮಿ ತಾಯಾಣೆ ನೀ ಇಷ್ಟ ಕಣೆ, ಹಿಂದೂಸ್ತಾನವು ಎಂದೂ ಮರೆಯದ, ಕನ್ನಡ ನಾಡಿನ ಕರಾವಳಿ, ನನ್ನವರು ಯಾರೂ ಇಲ್ಲ. ಯಾರಿಗೆ ಯಾರೂ ಇಲ್ಲ. ಕಾಲ ಮತ್ತೊಮ್ಮೆ ನಮಗಾಗಿ ಬಂತು. ಹೀಗೆ ಹಲವಾರು ಕನ್ನಡದ ಸುಪ್ರಸಿದ್ಧ ಗೀತೆಗಳನ್ನು ಹಾಡಿ ಜನಪ್ರಿಯತೆ ಗಳಿಸಿದ್ದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…