ಹೊಸದಿಲ್ಲಿ : 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (ಎಸ್ಐಆರ್)ಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಮಾಡಲು ಕಾಂಗ್ರೆಸ್ ತಂಡವೊಂದನ್ನು ರಚಿಸಿದೆ. ಇದು ಭಾರತೀಯ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ಮೇಲೆ ತೀವ್ರ ನಿಗಾ ವಹಿಸಲಿದೆ.
ಪರಿಷ್ಕರಣೆ ಕಾರ್ಯವಿಧಾನದ ಮೇಲೆ ನಿಗಾ ಇಡಲು ಆಯಾ ರಾಜ್ಯ ಕಾಂಗ್ರೆಸ್ ಘಟಕವು ತನ್ನ ಕಾರ್ಯಕರ್ತರನ್ನು ನೇಮಿಸಿದೆ. ಅವರು ದೈನಂದಿನ ಮತ್ತು ಸಾಪ್ತಾಹಿಕ ವರದಿಗಳನ್ನು ಮೇಲ್ವಿಚಾರಣೆ ಮಾಡಬೇಕು. ಆಗಸ್ಟ್ ನಲ್ಲಿ ಬಿಹಾರದಲ್ಲಿ ನಡೆದ ಪರಿಷ್ಕರಣೆಯ ವೇಳೆ ೬೫ ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಡಿಲೀಟ್ ಮಾಡಲಾಗಿತ್ತು. ಅದರಂತೆ ಈಗ ನಡೆಯುತ್ತಿರುವ ರಾಜ್ಯಗಳಲ್ಲಿ ಮತದಾರರು ತಮ್ಮ ನಮೂನೆಗಳನ್ನು ಭರ್ತಿ ಮಾಡಲು ಸಹಾಯ ಮಾಡುವಂತೆ ಕಾಂಗ್ರೆಸ್ ತನ್ನ ಸ್ಥಳೀಯ ಕಾರ್ಯಕರ್ತರಿಗೆ ಸೂಚಿಸಿದೆ.
ಇದನ್ನು ಓದಿ: Australian Open Badminton 2025 : ಲಕ್ಷ್ಯ ಸೇನ್ಗೆ ಚಿನ್ನದ ಪದಕ
ಚುನಾವಣಾ ಆಯೋಗದ ಈ ಪ್ರಕ್ರಿಯೆಯನ್ನು ವಿರೋಧಿಸುವ ಕಾಂಗ್ರೆಸ್, ಆಯಾ ರಾಜ್ಯ ಘಟಕಗಳಿಗೆ ಬೂತ್ ಮಟ್ಟದ ಏಜೆಂಟ್ಗಳನ್ನು ನೇಮಿಸಲು ಮತ್ತು ಬ್ಲಾಕ್ ಅಥವಾ ಮಂಡಲ ಮಟ್ಟದ ಕಾರ್ಯಕರ್ತರನ್ನು ನಿಯೋಜಿಸಲು ತಾಕೀತು ಮಾಡಿದೆ.
ನ.೧೮ರಂದು ಎಐಸಿಸಿ ಸಭೆಯಲ್ಲಿ ಪಕ್ಷದ ಕೆಲವು ಹಿರಿಯ ಕಾರ್ಯಕರ್ತರು ಸಾಂಸ್ಥಿಕ ಅಂತರ ಮತ್ತು ಸಾಕಷ್ಟು ಬಿಎಲ್ಎಗಳ ಕೊರತೆಯ ಸಮಸ್ಯೆಯನ್ನು ಪ್ರಸ್ತಾಪಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸವಾಲನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಹಂತಗಳಲ್ಲಿ ಪದಾಽಕಾರಿಗಳನ್ನು ನೇಮಿಸುವಂತೆಯೂ ಸೂಚಿಸಿದ್ದಾತಿ ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಉತ್ತರಪ್ರದೇಶ ಎಐಸಿಸಿ ಉಸ್ತುವಾರಿ ಅವಿನಾಶ್ ಪಾಂಡೆ, ಎಸ್ಐಆರ್ಅನ್ನು ಎದುರಿಸುವ ಕಾರ್ಯತಂತ್ರವನ್ನು ರಾಜ್ಯ ಮತ್ತು ಎಐಸಿಸಿ ನಾಯಕರೊಂದಿಗೆ ಚರ್ಚಿಸಲಾಗಿದೆ. ನಮ್ಮ ಕಾರ್ಯಕರ್ತರು ಬೂತ್ ಮಟ್ಟದವರೆಗೆ ಸಕ್ರಿಯರಾಗಿ ಭಾಗವಹಿಸಲಿದ್ದಾರೆ ಎಂದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…