ದೇಶ- ವಿದೇಶ

SIR | ಮೇಲ್ವಿಚಾರಣೆಗೆ ತಂಡ ರಚಸಿದ ಕಾಂಗ್ರೆಸ್‌

ಹೊಸದಿಲ್ಲಿ : 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಮಾಡಲು ಕಾಂಗ್ರೆಸ್ ತಂಡವೊಂದನ್ನು ರಚಿಸಿದೆ. ಇದು ಭಾರತೀಯ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ಮೇಲೆ ತೀವ್ರ ನಿಗಾ ವಹಿಸಲಿದೆ.

ಪರಿಷ್ಕರಣೆ ಕಾರ್ಯವಿಧಾನದ ಮೇಲೆ ನಿಗಾ ಇಡಲು ಆಯಾ ರಾಜ್ಯ ಕಾಂಗ್ರೆಸ್ ಘಟಕವು ತನ್ನ ಕಾರ್ಯಕರ್ತರನ್ನು ನೇಮಿಸಿದೆ. ಅವರು ದೈನಂದಿನ ಮತ್ತು ಸಾಪ್ತಾಹಿಕ ವರದಿಗಳನ್ನು ಮೇಲ್ವಿಚಾರಣೆ ಮಾಡಬೇಕು. ಆಗಸ್ಟ್ ನಲ್ಲಿ ಬಿಹಾರದಲ್ಲಿ ನಡೆದ ಪರಿಷ್ಕರಣೆಯ ವೇಳೆ ೬೫ ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಡಿಲೀಟ್ ಮಾಡಲಾಗಿತ್ತು. ಅದರಂತೆ ಈಗ ನಡೆಯುತ್ತಿರುವ ರಾಜ್ಯಗಳಲ್ಲಿ ಮತದಾರರು ತಮ್ಮ ನಮೂನೆಗಳನ್ನು ಭರ್ತಿ ಮಾಡಲು ಸಹಾಯ ಮಾಡುವಂತೆ ಕಾಂಗ್ರೆಸ್ ತನ್ನ ಸ್ಥಳೀಯ ಕಾರ್ಯಕರ್ತರಿಗೆ ಸೂಚಿಸಿದೆ.

ಇದನ್ನು ಓದಿ: Australian Open Badminton 2025 : ಲಕ್ಷ್ಯ ಸೇನ್‌ಗೆ ಚಿನ್ನದ ಪದಕ

ಚುನಾವಣಾ ಆಯೋಗದ ಈ ಪ್ರಕ್ರಿಯೆಯನ್ನು ವಿರೋಧಿಸುವ ಕಾಂಗ್ರೆಸ್, ಆಯಾ ರಾಜ್ಯ ಘಟಕಗಳಿಗೆ ಬೂತ್ ಮಟ್ಟದ ಏಜೆಂಟ್‌ಗಳನ್ನು ನೇಮಿಸಲು ಮತ್ತು ಬ್ಲಾಕ್ ಅಥವಾ ಮಂಡಲ ಮಟ್ಟದ ಕಾರ್ಯಕರ್ತರನ್ನು ನಿಯೋಜಿಸಲು ತಾಕೀತು ಮಾಡಿದೆ.

ನ.೧೮ರಂದು ಎಐಸಿಸಿ ಸಭೆಯಲ್ಲಿ ಪಕ್ಷದ ಕೆಲವು ಹಿರಿಯ ಕಾರ್ಯಕರ್ತರು ಸಾಂಸ್ಥಿಕ ಅಂತರ ಮತ್ತು ಸಾಕಷ್ಟು ಬಿಎಲ್‌ಎಗಳ ಕೊರತೆಯ ಸಮಸ್ಯೆಯನ್ನು ಪ್ರಸ್ತಾಪಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಸವಾಲನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಹಂತಗಳಲ್ಲಿ ಪದಾಽಕಾರಿಗಳನ್ನು ನೇಮಿಸುವಂತೆಯೂ ಸೂಚಿಸಿದ್ದಾತಿ ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಉತ್ತರಪ್ರದೇಶ ಎಐಸಿಸಿ ಉಸ್ತುವಾರಿ ಅವಿನಾಶ್ ಪಾಂಡೆ, ಎಸ್‌ಐಆರ್‌ಅನ್ನು ಎದುರಿಸುವ ಕಾರ್ಯತಂತ್ರವನ್ನು ರಾಜ್ಯ ಮತ್ತು ಎಐಸಿಸಿ ನಾಯಕರೊಂದಿಗೆ ಚರ್ಚಿಸಲಾಗಿದೆ. ನಮ್ಮ ಕಾರ್ಯಕರ್ತರು ಬೂತ್ ಮಟ್ಟದವರೆಗೆ ಸಕ್ರಿಯರಾಗಿ ಭಾಗವಹಿಸಲಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

3 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

9 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

9 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

9 hours ago