ದೇಶ- ವಿದೇಶ

12 ರಾಜ್ಯಗಳಲ್ಲಿ SIR ಜಾರಿ ; ಕರ್ನಾಟಕದಲ್ಲೂ ನಡೆಯುತ್ತಾ? ಏನಿದು SIR, ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್….

ಹೊಸದಿಲ್ಲಿ : ಬಿಹಾರದಲ್ಲಿ ಯಶಸ್ವಿಯಾಗಿ ನಡೆಸಿರುವ ಬೆನ್ನಲ್ಲೇ ದೇಶದ 9 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 12 ಕಡೆ ಮತದಾರ ಸಮಗ್ರ ಪರಿಷ್ಕರಣಿ ( SIR) ನಡೆಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮುಂದಿನ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಮೊದಲಿಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿ ಹೊಸದಾಗಿ ಮತದಾರರ ಪಟ್ಟಿ ರಚಿಸಲಾಗುವುದು ಎಂದು ತಿಳಿಸಿದರು.

ಇದರ ಮೊದಲ ಹಂತವಾಗಿ 2026 ಕ್ಕೆ ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯಗಳು ಸೇರಿದಂತೆ ಸುಮಾರು 12 ರಾಜ್ಯಗಳು ಈ ಪಟ್ಟಿಯಲ್ಲಿದೆ. ಮುಂದಿನ ವರ್ಷ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಗಳಿಗೆ ಚುನಾವಣೆಗಳು ನಡೆಯಲಿದ್ದು, ಹಾಗಾಗಿ, ಈ ರಾಜ್ಯಗಳಲ್ಲಿ ಮತದಾರರ ಪಟ್ಟಿಗಳನ್ನು ನವೀಕರಿಸುವುದು ಆಯೋಗಕ್ಕೆ ಆದ್ಯತೆಯಾಗಿದೆ. ಇನ್ನು ಈ ಪ್ರಕ್ರಿಯೆಯಲ್ಲಿ, ಹೊಸ ಮತದಾರರನ್ನು ಸೇರಿಸಲಾಗುತ್ತದೆ ಮತ್ತು ಹಳೆಯ ಅಥವಾ ತಪ್ಪಾದ ಮಾಹಿತಿಯನ್ನು ತೆಗೆದುಹಾಕಲಾಗುತ್ತದೆ.

ಮತದಾರರ ಪಟ್ಟಿಯ ಪ್ಯಾನ್-ಇಂಡಿಯಾ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇತ್ತೀಚೆಗೆ ಬಿಹಾರದಲ್ಲಿ ಮುಕ್ತಾಯಗೊಂಡಿದೆ. ಅಲ್ಲಿ ಮುಂದಿನ ತಿಂಗಳು ವಿಧಾನಸಭಾ ಚುನಾವಣೆಗಳು ನಡೆಯಲಿವೆ. SIRನ ಎರಡನೇ ಹಂತದಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿರವೆ ಎಂದು ಚುನಾವಣಾ ಆಯೋಗ ತಿಳಿಸಿದರು.

ಇದನ್ನೂ ಓದಿ:-3 ಕೋಟಿ ಅಧಿಕ ವಂಚನೆ ಆರೋಪ : ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ ; ಹಾಸನದ ಗ್ರಾಮದಲ್ಲಿ ಘಟನೆ

ದೇಶದಲ್ಲಿ ಕೊನೆಯದಾಗಿ ವಿಶೇಷ ತೀವ್ರ ಪರಿಷ್ಕರಣೆಯನ್ನು 21 ವರ್ಷಗಳ ಹಿಂದೆ ಅಂದರೆ 2002 – 2004 ರ ನಡುವೆ ಮಾಡಲಾಗಿತ್ತು. ಇದರೊಂದಿಗೆ ಎಲ್ಲಾ ಅರ್ಹ ಮತದಾರರನ್ನು SIR ಗೆ ಸೇರಿಸಲಾಗುತ್ತದೆ ಮತ್ತು ಅನರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದ ಅವರು, ಚುನಾವಣೆಗೆ ಮೊದಲು SIR ನಡೆಸುವುದು ಅತ್ಯಂತ ಮುಖ್ಯ ಎಂದರು.

ಇದರೊಂದಿಗೆ ನಮ್ಮ BLO ಗಳು ಪ್ರತಿ ಮನೆಗೆ ಮೂರು ಬಾರಿ ಭೇಟಿ ನೀಡಿ ಮತದಾರರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಾರೆ ಎಂದ ಅವರು, SIR ಪ್ರಕ್ರಿಯೆಯನ್ನು ಮಾಡಬೇಕಾದ ರಾಜ್ಯಗಳಲ್ಲಿ, ಇಂದು ರಾತ್ರಿ 12 ಗಂಟೆಯಿಂದ ಮತದಾರರ ಪಟ್ಟಿಯನ್ನು ಸ್ಥಗಿತಗೊಳಿಸಲಾಗುವುದು ಘೋಷಿಸಿದರು.

ಆಯೋಗದ ಕಾನೂನಿನ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಅಗತ್ಯವಿದೆ. ಪ್ರತಿಯೊಂದು ರಾಜಕೀಯ ಪಕ್ಷವೂ ಪರಿಷ್ಕರಣೆ ನಡೆಸದ ಬಗ್ಗೆ ದೂರು ನೀಡಿವೆ. ಇಲ್ಲಿಯವರಗೆ ಎಂಟು ಬಾರಿ SIR ನಡೆಸಿದೆ. 2002-2004 ರಲ್ಲಿ ಕೊನೆಯದಾಗಿ SIR ನಡೆಸಲಾಗಿತ್ತು. ಎರಡು ದಶಕದ ಬಳಿಕ ಈಗ SIR ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಳೆದ 20 ವರ್ಷದ ಅವಧಿಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸಾಕಷ್ಟು ಮತದಾರರ ವಿಳಾಸ ಬದಲಾವಣೆಯಾಗಿರುತ್ತದೆ, ವಿದೇಶಿಗರು ಪಟ್ಟಿಯಲ್ಲಿ ಸೇರಿರುತ್ತಾರೆ. ಕೆಲವರು ಮರಣದ ಬಳಿಕವೂ ಪಟ್ಟಿಯಲ್ಲಿ ಹೆಸರು ಉಳಿದುಕೊಂಡಿರುತ್ತದೆ. ಇದನ್ನು ತೆರವು ಮಾಡಲು SIR ಅಗತ್ಯವಿದೆ ಎಂದು ಆಯೋಗದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಕರ್ನಾಟಕದಲ್ಲಿ ವೆರಿಫಿಕೇಷನ್ ಆಗುತ್ತಾ?
ಎಸ್ಐಆರ್ – ಫೇಸ್ 2 ಪ್ರಕ್ರಿಯೆ ಜಾರಿಗೊಳ್ಳಲಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕದ ಹೆಸರಿಲ್ಲ. ಬಹುಶಃ ಫೇಸ್ 3 ಅಡಿಯಲ್ಲಿ ಕರ್ನಾಟಕದಲ್ಲಿ ಈ ಪ್ರಕ್ರಿಯೆ ಜಾರಿಯಾಗಬಹುದು. ಇಲ್ಲವೇ, 2028ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯು ಪರಿಷ್ಕರಣೆಯಾಗಬಹುದು.

ಏನಿದು ವಿಶೇಷ ತೀವ್ರ ಪರಿಷ್ಕರಣೆ..?
ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮುಖ್ಯ ಉದ್ದೇಶವು ಮತದಾರರ ಪಟ್ಟಿಗಳನ್ನು ಸುಧಾರಿಸಲು ಮತ್ತು ಹೊಸ ಮತದಾರರನ್ನು ಸೇರಿಸಲು ಆಗಿದೆ. ಈ ಪ್ರಕ್ರಿಯೆಯಲ್ಲಿ ಹೆಸರುಗಳ ಪರಿಶೀಲನೆ, ಅಸ್ತಿತ್ವದಲ್ಲಿರುವ ಮತದಾರರ ಮಾಹಿತಿಯ ದೃಢೀಕರಣ ಹಾಗೂ ಅಗತ್ಯ ತಿದ್ದುಪಡಿಗಳನ್ನು ಒಳಗೊಂಡಿರುತ್ತದೆ. ಚುನಾವಣಾ ಆಯೋಗದ ಪ್ರಕಾರ, ಈ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು, ನ್ಯಾಯಸಮ್ಮತವಾಗಿ ನಡೆಯುತ್ತದೆ. SIR ಮೂಲಕ ಮತದಾರರ ಪಟ್ಟಿಗಳಲ್ಲಿನ ದೋಷಗಳನ್ನು ಸರಿಪಡಿಸಿ, ಹೊಸ ಅರ್ಹ ಮತದಾರರನ್ನು ಸೇರಿಸುವ ಮೂಲಕ ಚುನಾವಣೆಗಳಲ್ಲಿ ಜನಸಾಮಾನ್ಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶವಾಗಿದೆ.

9 ರಾಜ್ಯಗಳು
ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ಗೋವಾ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್, ಕೇರಳ ಮತ್ತು ರಾಜಸ್ಥಾನ.
3 ಕೇಂದ್ರಾಡಳಿತ ಪ್ರದೇಶಗಳು
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಪುದುಚೇರಿ

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

33 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

51 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

1 hour ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago