ದೇಶ- ವಿದೇಶ

ಎಸ್‌ಐಆರ್‌ ಕಾನೂನುಬದ್ಧವಾಗಿದೆ : ಸುಪ್ರಿಂ ಮಹತ್ವದ ಆದೇಶ

ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸವೋಚ್ಚ ನ್ಯಾಯಾಲಯ ಮಹತ್ವದ ತೆರೆ ಎಳೆದಿದೆ.

ಚುನಾವಣಾ ಆಯೋಗದ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ತಳ್ಳಿಹಾಕಿದ ನ್ಯಾಯಪೀಠ, ಎಸ್‌ಐಆರ್ ಕ್ರಮವು ಕಾನೂನುಬದ್ಧವಾಗಿದ್ದು, ಇದು ಸ್ವಚ್ಛ ಮತ್ತು ನ್ಯಾಯಸಮ್ಮತ ಚುನಾವಣೆಗೆ ಸಹಕಾರಿಯಾಗುತ್ತದೆ ಎಂದು ಮಹತ್ವದ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ಚುನಾವಣಾ ಆಯೋಗಕ್ಕೆ ಈ ರೀತಿಯ ಎಸ್‌ಐಆರ್ ನಡೆಸುವ ಸಂಪೂರ್ಣ ಅಧಿಕಾರವಿದೆ ಎಂದು ಸ್ಪಷ್ಟಪಡಿಸಿದೆ.

ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿ ಮೀರಿಲ್ಲ. ಬಿಹಾರ ಮತದಾರರ ಪಟ್ಟಿಯ ಎಸ್‌ಐಆರ್ ಪ್ರಕ್ರಿಯೆ ಜನಪ್ರತಿನಿಧಿತ್ವ ಕಾಯ್ದೆ ಅಥವಾ ಸಂವಿಧಾನದ ಯಾವುದೇ ವಿಧಿಯನ್ನು ಉಲ್ಲಂಘಿಸಿಲ್ಲ ಎಂದು ಹೇಳಿದೆ. ತೀರ್ಪಿನಲ್ಲಿ, ‘ಮತದಾರರ ಪಟ್ಟಿಯ ಶುದ್ಧತೆ ಕಾಪಾಡುವುದು ಹಾಗೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ. ಹೆಸರುಗಳನ್ನು ತೆಗೆದುಹಾಕುವ ಹಂತ ಹಂತದ ವಿಧಾನ, ಆಕ್ಷೇಪಣೆ ಸಲ್ಲಿಸಲು ಅವಕಾಶ ಹಾಗೂ ಇತರ ಭದ್ರತಾ ಕ್ರಮಗಳು ಈ ಪ್ರಕ್ರಿಯೆಯನ್ನು ನ್ಯಾಯಸಮ್ಮತ ಮತ್ತು ಏಕಪಕ್ಷೀಯವಲ್ಲದಂತಾಗಿಸುತ್ತವೆ ಎಂದು ಉಲ್ಲೇಖಿಸಿದೆ.

ಇದೇ ವೇಳೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ಸುರಕ್ಷತಾ ಕ್ರಮಗಳು ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಲು ಸಹಕಾರಿಯಾಗುತ್ತವೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಕೈಗೆತ್ತಿಕೊಂಡಿತ್ತು.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ.ಎಂ. ಪಂಚೋಲಿ ಅವರನ್ನೊಳಗೊಂಡ ಪೀಠ ಜನವರಿ ೨೯ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.
ಸಂವಿಧಾನದ ಕಲಂ ೩೨೬, ಜನಪ್ರತಿನಿಧಿತ್ವ ಕಾಯ್ದೆ ೧೯೫೦ ಹಾಗೂ ಮತದಾರರ ನೋಂದಣಿ ನಿಯಮಾವಳಿ ೧೯೬೦ರ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಇಂತಹ ಎಸ್‌ಐಆರ್ ನಡೆಸುವ ಅಧಿಕಾರವಿದೆಯೇ ಎಂಬ ಪ್ರಶ್ನೆಯನ್ನು ನ್ಯಾಯಾಲಯ ಪರಿಶೀಲಿಸಿತು.

ಆಂದೋಲನ ಡೆಸ್ಕ್

Recent Posts

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

1 hour ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

2 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

3 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

4 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

4 hours ago