ದೇಶ- ವಿದೇಶ

ಎಸ್‌ಐಆರ್‌ ಕಾನೂನುಬದ್ಧವಾಗಿದೆ : ಸುಪ್ರಿಂ ಮಹತ್ವದ ಆದೇಶ

ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸವೋಚ್ಚ ನ್ಯಾಯಾಲಯ ಮಹತ್ವದ ತೆರೆ ಎಳೆದಿದೆ.

ಚುನಾವಣಾ ಆಯೋಗದ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ತಳ್ಳಿಹಾಕಿದ ನ್ಯಾಯಪೀಠ, ಎಸ್‌ಐಆರ್ ಕ್ರಮವು ಕಾನೂನುಬದ್ಧವಾಗಿದ್ದು, ಇದು ಸ್ವಚ್ಛ ಮತ್ತು ನ್ಯಾಯಸಮ್ಮತ ಚುನಾವಣೆಗೆ ಸಹಕಾರಿಯಾಗುತ್ತದೆ ಎಂದು ಮಹತ್ವದ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ಚುನಾವಣಾ ಆಯೋಗಕ್ಕೆ ಈ ರೀತಿಯ ಎಸ್‌ಐಆರ್ ನಡೆಸುವ ಸಂಪೂರ್ಣ ಅಧಿಕಾರವಿದೆ ಎಂದು ಸ್ಪಷ್ಟಪಡಿಸಿದೆ.

ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿ ಮೀರಿಲ್ಲ. ಬಿಹಾರ ಮತದಾರರ ಪಟ್ಟಿಯ ಎಸ್‌ಐಆರ್ ಪ್ರಕ್ರಿಯೆ ಜನಪ್ರತಿನಿಧಿತ್ವ ಕಾಯ್ದೆ ಅಥವಾ ಸಂವಿಧಾನದ ಯಾವುದೇ ವಿಧಿಯನ್ನು ಉಲ್ಲಂಘಿಸಿಲ್ಲ ಎಂದು ಹೇಳಿದೆ. ತೀರ್ಪಿನಲ್ಲಿ, ‘ಮತದಾರರ ಪಟ್ಟಿಯ ಶುದ್ಧತೆ ಕಾಪಾಡುವುದು ಹಾಗೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ. ಹೆಸರುಗಳನ್ನು ತೆಗೆದುಹಾಕುವ ಹಂತ ಹಂತದ ವಿಧಾನ, ಆಕ್ಷೇಪಣೆ ಸಲ್ಲಿಸಲು ಅವಕಾಶ ಹಾಗೂ ಇತರ ಭದ್ರತಾ ಕ್ರಮಗಳು ಈ ಪ್ರಕ್ರಿಯೆಯನ್ನು ನ್ಯಾಯಸಮ್ಮತ ಮತ್ತು ಏಕಪಕ್ಷೀಯವಲ್ಲದಂತಾಗಿಸುತ್ತವೆ ಎಂದು ಉಲ್ಲೇಖಿಸಿದೆ.

ಇದೇ ವೇಳೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ಸುರಕ್ಷತಾ ಕ್ರಮಗಳು ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಲು ಸಹಕಾರಿಯಾಗುತ್ತವೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಕೈಗೆತ್ತಿಕೊಂಡಿತ್ತು.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ.ಎಂ. ಪಂಚೋಲಿ ಅವರನ್ನೊಳಗೊಂಡ ಪೀಠ ಜನವರಿ ೨೯ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.
ಸಂವಿಧಾನದ ಕಲಂ ೩೨೬, ಜನಪ್ರತಿನಿಧಿತ್ವ ಕಾಯ್ದೆ ೧೯೫೦ ಹಾಗೂ ಮತದಾರರ ನೋಂದಣಿ ನಿಯಮಾವಳಿ ೧೯೬೦ರ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಇಂತಹ ಎಸ್‌ಐಆರ್ ನಡೆಸುವ ಅಧಿಕಾರವಿದೆಯೇ ಎಂಬ ಪ್ರಶ್ನೆಯನ್ನು ನ್ಯಾಯಾಲಯ ಪರಿಶೀಲಿಸಿತು.

ಆಂದೋಲನ ಡೆಸ್ಕ್

Recent Posts

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

10 mins ago

ನಿವೃತ್ತ ಅರಣ್ಯಾಧಿಕಾರಿ ಮನೆಯಿಂದ 2ಕೋಟಿ ರೂ. ಮೌಲ್ಯದ ಆನೆ ದಂತ ವಶ

ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್‌ಐ) ಮೈಸೂರಿನಲ್ಲಿ ಶಂಕಿತ…

16 mins ago

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

4 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

4 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

6 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

7 hours ago