ದೇಶ- ವಿದೇಶ

ಪ್ರಕರಣಗಳ ಬಾಕಿ ಉಳಿಯುವಿಕೆಯಿಂದ ಸಣ್ಣ, ಮಧ್ಯಮ ಕೈಗಾರಿಕೆಗಳು ಮುಚ್ಚುತ್ತಿವೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೌಲ್

ನವದೆಹಲಿ: ಅಭಿವೃದ್ಧಿಯನ್ನೇ ಕುರುಡಾಗಿ ಧ್ಯಾನಿಸಿದರೆ ಉದ್ಯೋಗ ಸೃಷ್ಟಿಯ ತನ್ನ ಪ್ರಯತ್ನದಲ್ಲಿ ಭಾರತ ಸಾಫಲ್ಯ ಕಾಣಲು ಸಾಧ್ಯವಿಲ್ಲ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು (ಎಂಎಸ್‌ಎಂಇ) ಉತ್ತೇಜಿಸುವ ಮೂಲಕ ಸರ್ವತೋಮುಖ ಬೆಳವಣಿಗೆಗೆ ಮುಂದಾಗುವುದು ಈಗಿನ ಅಗತ್ಯ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ತಿಳಿಸಿದರು.

ವಕೀಲರಾದ ಅಮಿತ್ ಜಾರ್ಜ್ ಮತ್ತು ತಾರಿಕ್ ಖಾನ್ ಅವರು ರಚಿಸಿರುವ ʼಲಾ ರಿಲೇಟಿಂಗ್‌ ಟು ಮೈಕ್ರೊ, ಸ್ಮಾಲ್‌ ಅಂಡ್‌ ಮೀಡಿಯಂ ಎಂಟರ್‌ಪ್ರೈಸ್‌ʼ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂತಹ ಉದ್ದಿಮೆಗಳು ಉದ್ಯೋಗ ಸೃಷ್ಟಿಗೆ ಕಾರಣವಾಗುವುದಲ್ಲದೆ, ದೇಶದ ಶ್ರೀಮಂತ ಮತ್ತು ಬಡ ಪ್ರದೇಶಗಳ ನಡುವಿನ ಅಂತರ ಕಡಿಮೆ ಮಾಡುತ್ತವೆ ಎಂದು ಅವರು ತಿಳಸಿದರು. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ರಾಜೀವ್ ಶಕ್ಧೆರ್ ಮತ್ತು ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನ್ಯಾ. ಕೌಲ್‌ ಅವರ ಭಾಷಣದ ಪ್ರಮುಖಾಂಶಗಳು

ಕೇಂದ್ರೀಕೃತ ಕೈಗಾರಿಕೀಕರಣದಲ್ಲಿ ಕುರುಡು ನಂಬಿಕೆ ಇರಿಸುವುದು ಏಕಸ್ವಾಮ್ಯವನ್ನು ಹೆಚ್ಚಿಸುತ್ತದೆ. ಬಹುಶಃ ಅದು ಪ್ರಗತಿಯ ಹಾದಿಯಲ್ಲ.

ತೊಂಬತ್ತರ ದಶಕದ ಸುಧಾರಣೆಗಳು ಅಭಿವೃದ್ಧಿ ಕಾರ್ಯಸೂಚಿಯನ್ನು ಪ್ರೋತ್ಸಾಹಿಸಿದರೂ ನೀತಿ ನಿರೂಪಕರಿಗೆ ಉದ್ಯೋಗ ಸೃಷ್ಟಿ ಪ್ರಮುಖ ಸವಾಲಾಗಿ ಉಳಿದಿದೆ. ಅತಿಸಣ್ಣ ಆರ್ಥಿಕತೆಯಲ್ಲಿ ಒಂದೇ ಗಾತ್ರ ಸರ್ವಾನ್ವಯ ಎಂಬ ಸೂತ್ರ ಎಷ್ಟು ಅಸಮರ್ಥವಾಗಿದೆ ಎಂಬುದನ್ನು ಚೀನಾ ಆರ್ಥಿಕತೆಯಿಂದ ನಾವು ಅರಿಯಬೇಕು.

ಭಾರತ ಒಂದು ಅನನ್ಯ ದೇಶವಾಗಿದ್ದು, ಭೌಗೋಳಿಕವಾಗಿ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಇಲ್ಲಿನ ನೆಲಕ್ಕೆ ಅನುಗಣವಾಗಿ ಪರಿಹಾರ ವಿಶಿಷ್ಟ ರೀತಿಯಲ್ಲಿ ದೊರೆಯಬೇಕು.

ತಮ್ಮ ಪ್ರದೇಶಗಳಲ್ಲಿ ಉದ್ಯೋಗದ ಕೊರತೆಯಿಂದಾಗಿ ಹಳ್ಳಿಗಳಿಂದ ನಗರಗಳಿಗೆ ದೊಡ್ಡ ಪ್ರಮಾಣದಲ್ಲಿ ಜನ ವಲಸೆ ಹೋಗುತ್ತಿದ್ದಾರೆ. ಅವರು ಹಳ್ಳಿಗಳಲ್ಲೇ ಉಳಿದು ತಾವು ಮಾಡುವ ಕೆಲಸದಿಂದ ಹಣ ಗಳಿಸಲು ಅತಿಸಣ್ಣ, ಸಣ್ಣ, ಮಧ್ಯಮ ಉದ್ದಿಮೆಗಳು ಅನುಕೂಲ ಮಾಡಿಕೊಡಬೇಕು. ಅವಕಾಶಗಳು ಇದ್ದಲ್ಲಿ ಯಾರೂ ತಮ್ಮ ಊರುಗಳಿಂದ ದೂರ ಹೋಗುವುದಿಲ್ಲ

ಅಸಮರ್ಥ ವ್ಯಾಜ್ಯ ಪರಿಹಾರ ವಿಧಾನಗಳಿಂದಾಗಿ ಇಂತಹ ಉದ್ದಿಮೆಗಳ ಪ್ರವರ್ಧಮಾನಕ್ಕೆ ಅಡ್ಡಿಯಾಗಿದೆ. ನ್ಯಾಯಾಂಗ ಪರಿಹಾರಕ್ಕೆ ಕೆಲಸ ಮಾಡುವುದು ಶಾಸಕಾಂಗ ಪರಿಹಾರಕ್ಕೆ ಕೆಲಸ ಮಾಡುವಷ್ಟೇ ಮುಖ್ಯ.

ನಿರಂತರವಾಗಿ ಪ್ರಕರಣಗಳು ಬಾಕಿ ಉಳಿಯುತ್ತಿರುವುದು ಎಂಎಸ್‌ಎಂಇ ಬೆಳವಣಿಗೆಗೆ ಅಡ್ಡಿಯಾಗಿದೆ. ವ್ಯಾಜ್ಯ ಇತ್ಯರ್ಥ ವಿಳಂಬವಾಗುತ್ತಿರುವುದರಿಂದ ಸಣ್ಣ ಕಂಪೆನಿಗಳು ಸ್ಥಗಿತವಾಗಿ ಆರ್ಥಿಕ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ.

ಎಂಎಸ್‌ಎಂಇ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬಹುದೇ ಅಥವಾ ತಾತ್ಕಾಲಿಕ ಆಧಾರದ ಮೇಲೆ ಪರಿಣಿತ ಸದಸ್ಯರೊಂದಿಗೆ ವಿಶೇಷ ನ್ಯಾಯಮಂಡಳಿಗಳನ್ನು ರಚಿಸಬಹುದೇ ಎಂಬ ಕುರಿತು ಚಿಂತಿಸಬೇಕಿದೆ. ಈ ಕುರಿತು ಎಂಎಸ್‌ಎಂಇ ವಲಯದ ಪಾಲುದಾರರೇ ಪರಿಹಾರ ಕಂಡುಕೊಳ್ಳಬೇಕು.

ನ್ಯಾಯಮೂರ್ತಿ ರಾಜೀವ್ ಶಕ್ದೆರ್‌ ಅವರು ಮಾತನಾಡಿ ಎಂಎಸ್‌ಎಂಇಗಳು ಹೊಸ ಪರಿಕಲ್ಪನೆಯಲ್ಲ. ಸ್ವಾತಂತ್ರ್ಯ ದೊರೆತ ಸಮಯದಿಂದಲೇ ಸಣ್ಣ ಕೈಗಾರಿಕೆಗಳ ಚಿಂತನೆ ಬೇರೂರಿದೆ. ಆರ್ಥಿಕತೆಯ ಉದಾರೀಕರಣದವರೆಗೆ ಸಣ್ಣ ಕೈಗಾರಿಕೆಗಳು ರಕ್ಷಾಕವಚಗಳಾಗಿ ಕೆಲಸ ಮಾಡುತ್ತಿದ್ದವು ಎಂದು ಹೇಳಿದರು. ಪುಸ್ತಕದ ಕುರಿತು ಅವರು ಮೆಚ್ಚುಗೆಯ ಮಾತುಗಳನ್ನಾಡಿದರು.

ಎಂಎಸ್‌ಎಂಇಗಳ ಅನುಕೂಲಗಳ ಕುರಿತು ಮಾತನಾಡಿದ ಸಿದ್ಧಾರ್ಥ್‌ ಲೂತ್ರಾ 6.33 ಕೋಟಿ ಎಂಎಸ್‌ಎಂಇಗಳು 11 ಕೋಟಿಗೂ ಹೆಚ್ಚು ಜನರಿಗೆ ಉದ್ಯೋಗ ಕಲ್ಪಿಸಿವೆ. ನಮ್ಮ ಆರ್ಥಿಕತೆ ಬೆಳೆಯುತ್ತಿದ್ದರೂ, ಉದ್ಯೋಗದ ಪ್ರಮಾಣ ಕಡಿಮೆಯಾಗುತ್ತಿದೆ. ಈ ಸವಾಲಿಗೆ ಪರಿಹಾರವೆಂದರೆ ಎಂಎಸ್‌ಎಂಇಗಳು ಉದ್ಯೋಗಗಳನ್ನು ಜನರ ಬಳಿಗೆ ಒಯ್ಯುವುದಾಗಿದೆ.

andolana

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

3 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

6 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

8 hours ago