ದೇಶ- ವಿದೇಶ

ಹಾವು ಕಡಿತ ಇನ್ನು ಘೋಷಿತ ಕಾಯಿಲೆ: ಕೇಂದ್ರ ಸರ್ಕಾರ

ಹೊಸದಿಲ್ಲಿ: ದೇಶದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಹಾವು ಕಡಿತವನ್ನು ಕಾಯಿಲೆ ಎಂದು ಘೋಷಣೆ ಮಾಡಿದೆ.

ಕೇಂದ್ರ ಸರ್ಕಾರ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾವು ಕಡಿತ ಹಾಗೂ ಅದರಿಂದಾಗುವ ಸಾವಿನ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು. ಇನ್ನು ಮುಂದೆ ಎಲ್ಲ ಆರೋಗ್ಯ ಕೇಂದ್ರಗಳು ಹಾವು ಕಡಿತ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಯನ್ನು ನಮೂದಿಸಬೇಕು ಎಂದು ಆದೇಶ ಹೊರಡಿಸಿದೆ.

ಹಾವು ಕಡಿತವು ಸಾರ್ವಜನಿಕ ಆರೋಗ್ಯದ ಕಾಳಜಿಯ ವಿಷಯವಾಗಿದೆ ಮತ್ತು ಕೆಲವು ಸಂದರ್ಭಗಳಲ್ಲಿ ಅದು ಮರಣ, ರೋಗ ಮತ್ತು ಅಂಗವೈಕಲ್ಯಕ್ಕೆ ಕಾರಣವಾಗುತ್ತದೆ. 2030ರ ವೇಳೆಗೆ ಭಾರತದಲ್ಲಿ ಹಾವು ಕಡಿತದ ತಡೆಗಟ್ಟುವಿಕೆ ಮತ್ತು ಸೂಕ್ತ ಔಷಧ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ಪ್ರಾರಂಭಿಸಿದೆ. 2030ರ ವೇಳೆಗೆ ಹಾವು ಕಡಿತ ಸಂಬಂಧಿತ ಸಾವುಗಳನ್ನು ಅರ್ಧದಷ್ಟು ಕಡಿಮೆ ಮಾಡುವುದು ಕ್ರಿಯಾ ಯೋಜನೆಯ ಉದ್ದೇಶ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಪ್ರದೇಶ ಹಾಗೂ ಬುಡಕಟ್ಟು ಪ್ರದೇಶಗಳಲ್ಲಿ ಹಾವು ಕಡಿತದ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದ್ದು, ಹಲವರು ಹಾವು ಕಡಿತಕ್ಕೊಳಗಾಗಿ ಮೃತ ಪಟ್ಟಿದ್ದಾರೆ. ಈಗಾಗಲೇ ಹಲವಾರು ರಾಜ್ಯಗಳು ಹಾವು ಕಡಿತವನ್ನು ಕಾಯಿಲೆ ಎಂದು ಘೋಷಿಸಿವೆ. ಅದರಲ್ಲಿ ದೇಶದಲ್ಲಿ ಹಾವು ಕಡಿತವನ್ನು ಕಾಯಿಲೆ ಎಂದು ಘೋಷಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

7 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

11 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

12 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

12 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

12 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

12 hours ago