ಲಡಾಖ್: ಕೇಂದ್ರಾಡಳಿತ ಪ್ರದೇಶ ಲಡಾಖ್ನ ವಾಸ್ತವ ನಿಯಂತ್ರಣ ರೇಖೆ ಬಳಿ ಇಂದು ಭಾರೀ ದುರ್ಘಟನೆಯೊಂದು ಜರುಗಿದೆ.
ಇಂದು ಮುಂಜಾನೆ ಲಡಾಖ್ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ ಬಳಿ ಟಿ-72 ಟ್ಯಾಂಕ್ನಲ್ಲಿ ನದಿಯೊಂದನ್ನು ದಾಟುತ್ತಿದ್ದಾಗ ಹಠಾತ್ ಪ್ರವಾಹ ಉಂಟಾಗಿದ್ದು, ಐವರು ಯೋಧರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲೇಹ್ನಿಂದ 148 ಕಿ.ಮೀ ದೂರದಲ್ಲಿರುವ ಮಂದಿರ್ ಮೋರ್ ಬಳಿ ಬೆಳಿಗ್ಗೆ ೧ ಗಂಟೆ ಸುಮಾರಿಗೆ ಟ್ಯಾಂಕ್ನೊಂದಿಗೆ ನದಿಯನ್ನು ದಾಟುವ ಅಭ್ಯಾಸ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಸೇನಾ ಟ್ಯಾಂಕ್ ಅಪಘಾತಕ್ಕೀಡಾಗಿದ್ದು, ನದಿಯ ಆಳವಾದ ಭಾಗವನ್ನು ದಾಟುತ್ತಿದ್ದಾಗ ಸಿಲುಕಿಕೊಂಡಿತ್ತು. ಈ ವೇಳೆ ಏಕಾಏಕಿ ನೀರಿನ ಮಟ್ಟ ಏರಿದ್ದರಿಂದ ಸೈನಿಕರು ಕೊಚ್ಚಿಕೊಂಡು ಹೋಗಿದ್ದಾರೆ.
ಭಾರತದಲ್ಲಿ 2400 ಟಿ-72 ಟ್ಯಾಂಕ್ಗಳಿವೆ. ಭಾರತೀಯ ಸೇನೆಯು ಈ ಟ್ಯಾಂಕ್ಗಳನ್ನು ಬಹಳ ಹಿಂದಿನಿಂದಲೂ ಬಳಸುತ್ತಿದೆ. ಅಪಘಾತದ ಸಮಯದಲ್ಲಿ ಇತರ ಟ್ಯಾಂಕ್ಗಳು ಸಹ ಅಲ್ಲಿದ್ದವು. ಎಲ್ಲಾ ಐದು ಸೈನಿಕರ ಶವಗಳನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿಮ ಕರಗುವಿಕೆಯಿಂದ ನೀರಿನ ಮಟ್ಟ ಇದ್ದಕ್ಕಿದ್ದಂತೆ ಹೆಚ್ಚಾಗಿದೆ ಎಂದು ಊಹಿಸಲಾಗಿದ್ದು, ಶ್ಯೋಕ್ ಸಿಂಧೂ ನದಿಯ ಉಪನದಿಯಾಗಿದೆ.
ಘಟನೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಲಡಾಖ್ನಲ್ಲಿ ನದಿ ದಾಟುವಾಗ ಸಂಭವಿಸಿದ ಅಪಘಾತದಲ್ಲಿ ನಮ್ಮ ಐವರು ಧೈರ್ಯಶಾಲಿ ಸೈನಿಕರು ಪ್ರಾಣ ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ನಮ್ಮ ಸೈನಿಕರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ದುಃಖದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು…
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ…
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಲು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆಯ ವಿರೋಧ…
ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ…
ಚೆನ್ನೈ : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ.…
ಕೆ.ಆರ್.ಪೇಟೆ: ತಾಲೂಕಿನ ಕಸಬಾ ಹೋಬಳಿಯ ಮಾಕವಳ್ಳಿ ಗ್ರಾಮದಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ತಡರಾತ್ರಿ ನಡೆದ ದಾಳಿಯಲ್ಲಿ ಗರ್ಭಿಣಿ ಹೆಮ್ಮೆ ಸಾವನ್ನಪ್ಪಿದ…