ದೇಶ- ವಿದೇಶ

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ಬಿಲಾಂಗಿಂಗ್ ಎ ಜರ್ನಿ ಆಫ್ ಲವ್ ಪುಸ್ತಕದ ಪ್ರಕಟಣೆಯು ರಾಜಕೀಯ ಮತ್ತು ಸಾಹಿತ್ಯಿಕ ವಲಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ.

ಪುಸ್ತಕದ ಒಡಂಬಡಿಕೆ ಮತ್ತು ಸಂಪಾದಕೀಯ ಬದಲಾವಣೆಗಳ ವಿಚಾರವಾಗಿ ಪ್ರಕಾಶನ ಸಂಸ್ಥೆ ಹಾಗೂ ರಾಜಕೀಯ ಪಕ್ಷಗಳ ನಡುವೆ ಮಾತಿನ ಸಮರವೇ ಏರ್ಪಟ್ಟಿದೆ. ನವೆಂಬರ್ ೧೦ರಂದು ಜಾಗತಿಕವಾಗಿ ಬಿಡುಗಡೆಯಾಗಲಿರುವ ಈ ಆತ್ಮಕಥೆಯನ್ನು ಭಾರತದಲ್ಲಿ ಪ್ರಕಟಿಸಬೇಕಿದ್ದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸಂಸ್ಥೆಯು, ಭಾರತೀಯ ಆವೃತ್ತಿಯ ಪ್ರಕಾಶಕರು ತಾವಲ್ಲ ಎಂದು ಅಧಿಕೃತವಾಗಿ ಸ್ಪಷ್ಟಪಡಿಸಿದೆ.

ಹಸ್ತಪ್ರತಿಯಲ್ಲಿ ಕೆಲವು ಸಂಪಾದಕೀಯ ಬದಲಾವಣೆಗಳನ್ನು ಮತ್ತು ಸತ್ಯ ಪರಿಶೀಲನೆ ಶಿಫಾರಸುಗಳನ್ನು ಮಾಡುವುದು ಪ್ರಕಾಶನ ಸಂಸ್ಥೆಯ ಸಾಮಾನ್ಯ ಪ್ರಕ್ರಿಯೆಯಾಗಿದೆಯೆಂಬುದನ್ನು ಪೆಂಗ್ವಿನ್ ಸಮರ್ಥಿಸಿಕೊಂಡಿದೆ. ಆದರೆ, ಪ್ರಕಾಶಕರು ಸೂಚಿಸಿದ ಬದಲಾವಣೆಗಳಿಗೆ ಲೇಖಕಿ ಸೋನಿಯಾ ಗಾಂಧಿ ಒಪ್ಪದ ಕಾರಣ ಉಭಯತರ ನಡುವಿನ ಒಪ್ಪಂದ ಮುರಿದುಬಿದ್ದಿದ್ದು, ಪುಸ್ತಕದ ಭಾರತೀಯ ಹಕ್ಕುಗಳಿಗಾಗಿ ಪ್ರಸ್ತುತ ಹಾರ್ಪರ್‌ಕಾಲಿನ್ಸ್‌ಸ್ ಸೇರಿದಂತೆ ಇತ್ತೀಚಿನ ಇತರೆ ಪ್ರಕಾಶನ ಸಂಸ್ಥೆಗಳೊಂದಿಗೆ ಮಾತುಕತೆಗಳು ನಡೆಯುತ್ತಿವೆ.‌

ಕಾಂಗ್ರೆಸ್ ಆಕ್ರೋಶ ಮತ್ತು ಗಂಭೀರ ಆರೋಪಗಳು ಪುಸ್ತಕದ ಪ್ರಕಟಣೆಯಲ್ಲಿ ಉಂಟಾಗಿರುವ ತೊಡಕಿಗೆ ಕೇಂದ್ರ ಸರ್ಕಾರದ ಪರೋಕ್ಷ ರಾಜಕೀಯ ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಹಿರಿಯ ನಾಯಕರು ತೀವ್ರವಾಗಿ ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಹಾಗೂ ಚೀನಾ ಆಕ್ರಮಣದ ಕುರಿತಾದ ಸೂಕ್ಷ್ಮ ಹಾಗೂ ಟೀಕಾತ್ಮಕ ಅಂಶಗಳನ್ನು ಕೈಬಿಡುವಂತೆ ಅಥವಾ ಬದಲಾಯಿಸುವಂತೆ ಪ್ರಕಾಶಕರ ಮೇಲೆ ಒತ್ತಡ ಹೇರಲಾಗಿದೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.

ಬಿಜೆಪಿ ತಿರುಗೇಟು :
ಕಾಂಗ್ರೆಸ್‌ನ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ ಮತ್ತು ಬಲಪಂಥೀಯ ಚಿಂತಕರು, ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪಕ್ಷವು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ಯಾವುದೇ ಆತಚರಿತ್ರೆ ಅಥವಾ ಕೃತಿಯಲ್ಲಿ ಸತ್ಯಾಸತ್ಯತೆ, ಜೀವಂತ ವ್ಯಕ್ತಿಗಳ ಮೇಲಿನ ಆರೋಪಗಳು ಹಾಗೂ ದೇಶದ ಭದ್ರತೆ ಅಥವಾ ಗಡಿ ರೇಖೆಗೆ ಸಂಬಂಧಿಸಿದ ಸೂಕ್ಷ್ಮ ಸಂಗತಿಗಳಿದ್ದಾಗ ಪ್ರಕಾಶನ ಸಂಸ್ಥೆಗಳು ಕಾನೂನಾತ್ಮಕ ಹಾಗೂ ಸಂಪಾದಕೀಯ ದೃಷ್ಟಿಯಿಂದ ಸತ್ಯ ಪರಿಶೀಲನೆ ನಡೆಸುವುದು ಅವುಗಳ ಜವಾಬ್ದಾರಿಯಾಗಿದೆ.

 

ಆಂದೋಲನ ಡೆಸ್ಕ್

Recent Posts

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

11 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

5 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

8 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

9 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

9 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

9 hours ago