ದೇಶ- ವಿದೇಶ

ಶೀಘ್ರದಲ್ಲೇ ಅತಿದೊಡ್ಡ ವಿಮಾನ ಬೆಂಗಳೂರಿಗೆ ಬರಲಿದೆ

ನವದೆಹಲಿ: ಜಗತ್ತಿನ ಅತೀ ದೊಡ್ಡ ವಿಮಾನ A380 ಶೀಘ್ರದಲ್ಲೇ ನಮ್ಮ ಬೆಂಗಳೂರಿಗೆ ಬರಲಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ  ರನ್‌ವೇ ಈ ದೈತ್ಯ ವಿಮಾನವನ್ನು ಸ್ವೀಕರಿಸಲು ಸಿದ್ಧವಾಗಿದೆ.

ಹಲವಾರು ವರ್ಷಗಳ ನಂತರ ಎಮಿರೇಟ್ಸ್ ಏರ್‌ಲೈನ್ಸ್ ಅಕ್ಟೋಬರ್ 30 ರಿಂದ ಜಂಬೋ ಜೆಟ್ ಅನ್ನು ಜನನಿಬಿಡ ಬೆಂಗಳೂರು-ದುಬೈ ಮಾರ್ಗದಲ್ಲಿ ನಿಯೋಜಿಸಲಿದೆ. A380 ಕೋಡ್ ಎಫ್ ವಿಮಾನವಾಗಿದೆ. ಕೋಡ್ ಎಫ್ ಎಂದರೆ ವಿಮಾನದ ವಿಂಗ್ ಸ್ಪಾನ್ 65 ಮೀಟರ್ ಗಳಿಂದ ಹೆಚ್ಚು ಆದರೆ 80 ಮೀಟರ್ ಗಳಿಗಿಂತ ಕಡಿಮೆ ಇದೆ. A380ನ ವಿಂಗ್ ಸ್ಪಾನ್ 79.8 ಮೀಟರ್ ಇದೆ. ಕೋಡ್ ಎಫ್ ಅಡಿಯಲ್ಲಿರುವ ಏಕೈಕ ಪ್ಯಾಸೆಂಜರ್ ವಿಮಾನ ಬೋಯಿಂಗ್ 747. ಎ380 ವಿಶಾಲವಾದ ಡಬಲ್ ಡೆಕರ್ ವಿಮಾನವಾಗಿದ್ದು 500ಕ್ಕಿಂತ ಹೆಚ್ಚು ಜನರಿಗೆ ಪ್ರಯಾಣಿಸುವ ಆಸನ ವ್ಯವಸ್ಥೆ ಇದೆ.

ದೆಹಲಿ ಮತ್ತು ಮುಂಬೈ ನಂತರ ಅತೀ ದೊಡ್ಡ ವಿಮಾನ ಬಂದಿಳಿಯುವ ಮೂರನೇ ವಿಮಾನ ನಿಲ್ದಾಣವಾಗಿದೆ ಬೆಂಗಳೂರು ವಿಮಾನ ನಿಲ್ದಾಣ. ದಿನ ನಿತ್ಯ ಸೇವೆಗಾಗಿ ಎಮಿರೇಟ್ಸ್ ಏರ್ ಲೈನ್ಸ್ A380 ನಿಯೋಜನೆಯಾಗಿರುವ ಭಾರತದ ಎರಡನೇ ನಗರ ಇದಾಗಿದೆ. ವಿಮಾನಯಾನ ಸಂಸ್ಥೆಯು 2014 ರಿಂದ ಮುಂಬೈ-ದುಬೈ ಮಾರ್ಗದಲ್ಲಿ A380 ನ್ನು ಹಾರಾಟ ಮಾಡುತ್ತಿದೆ. ಬೆಂಗಳೂರು-ದುಬೈ ಮಾರ್ಗದಲ್ಲಿ ಪ್ರತಿ ದಿನ A380 ವಿಮಾನವು EK568/569 ಎಕಾನಮಿ, ಬ್ಯುಸಿನೆಸ್ ಮತ್ತು ಫಸ್ಟ್ ಕ್ಲಾಸ್ ಈ ಮೂರು ಕ್ಲಾಸ್ ಗಳಿರುವ ಪ್ರಯಾಣ ಮಾಡುತ್ತಿದೆ.

EK568 ವಿಮಾನವು ಅಕ್ಟೋಬರ್ 30ರಂದು ದುಬೈಯಿಂದ ಸ್ಥಳೀಯ ಕಾಲಮಾನ ರಾತ್ರಿ  9.25ಕ್ಕೆ ಹೊರಟು ಮರುದಿನ ಮುಂಜಾನೆ 2.30ಕ್ಕೆ ಬೆಂಗಳೂರು ತಲುಪಲಿದೆ. ಹಿಂತಿರುಗುವ ವಿಮಾನ EK569 ಬೆಂಗಳೂರು ವಿಮಾನ ನಿಲ್ದಾಣದಿಂದ ಅಕ್ಟೋಬರ್ 31ಕ್ಕೆ ಮುಂಜಾನೆ 4.30ಕ್ಕೆ ಹೊರಟು ಬೆಳಗ್ಗೆ 7.10ಕ್ಕೆ ದುಬೈ ತಲುಪಲಿದೆ. A380ನಲ್ಲಿರುವ ಎಕಾನಮಿ ಕ್ಲಾಸ್ ನಲ್ಲಿರುವ ಸೀಟುಗಳು ದೊಡ್ಡದಾಗಿದ್ದು ಕಾಲಿಡುವ ಜಾಗವೂ ವಿಶಾಲವಾಗಿದೆ. ಬ್ಯುಸಿನೆಸ್ ಕ್ಲಾಸ್ ನಲ್ಲಿ ಫ್ಲಾಟ್ ಸೀಟ್ ಆಗಿದ್ದು ಫಸ್ಟ್ ಕ್ಲಾಸ್ ನಲ್ಲಿ ಪ್ರೈವೆಟ್ ಸೂಟ್ಸ್ ಮತ್ತು ಶವರ್ ಸ್ಪಾ ಇದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ನವೆಂಬರ್ 2021ರಲ್ಲಿ A380 ವಿಮಾನದಲ್ಲಿ 249 ಪ್ರಯಾಣಿಕರು ಜಗತ್ತಿನ 70 ಸ್ಥಳಗಳಿಗೆ ಪಯಣಿಸಿದ್ದಾರೆ. ಭಾರತದಲ್ಲಿ ದೆಹಲಿ, ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ 400ಕ್ಕಿಂತಲೂ ಹೆಚ್ಚು ವಿಮಾನ ನಿಲ್ದಾಣಗಳು A380 ವಿಮಾನಕ್ಕೆ ಅನುಕೂಲಕರವಾಗಿದೆ. A380 ವಿಮಾನವನ್ನು 2007 ಅಕ್ಟೋಬರ್ 25ರಂದು ಕಮರ್ಷಿಯಲ್ ಸೇವೆಗಾಗಿ ಸಿಂಗಾಪುರ್ ಏರ್ ಲೈನ್ಸ್ ನಲ್ಲಿ ನಿಯೋಜಿಸಲಾಗಿತ್ತು. ಕಳೆದ ವರ್ಷ ಮೇ ತಿಂಗಳಲ್ಲಿ ಏರ್ ಬಸ್ ಈ ವಿಮಾನ ನಿರ್ಮಾಣವನ್ನು ನಿಲ್ಲಿಸಿತ್ತು.

andolana

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

32 mins ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

38 mins ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

41 mins ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

45 mins ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

49 mins ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

1 hour ago