ನವದೆಹಲಿ: ನಮ್ಮ ದೇಶದ ವಿರುದ್ಧ ಪಾಕ್ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಕದನ ವಿರಾಮದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.400 ಕ್ಷಿಪಣಿ, ಬ್ರಹ್ಮೋಸ್ ನೆಲೆ ನಾಶವಾಗಿಲ್ಲ. ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಚಂಡೀಗಢದಲ್ಲಿ ಪಾಕ್ ಶೆಲ್ ಮೇಲೆ ದಾಳಿ ಮಾಡಿರೋದು ಸುಳ್ಳು ಸುದ್ದಿಯಾಗಿದೆ. ಭಾರತೀಯ ಸೇನೆಯು ಪಾಕಿಸ್ತಾನದ ಡ್ರೋನ್ಗಳನ್ನು ಹೊಡೆದುರುಳಿಸಿದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತೀಯ ಸೇನೆಯು ಕೇವಲ ಪಾಕ್ನ ಸೇನಾವಲಯಗಳನ್ನು ಗುರಿ ಮಾಡಿ ದಾಳಿ ಮಾಡಿದೆ. ನಮ್ಮ ದಾಳಿಯಿಂದ ಪಾಕಿಸ್ತಾನ ಸೇನೆಗೆ ಸಾಕಷ್ಟು ನಷ್ಟವಾಗಿದೆ ಎಂದು ಹೇಳಿದರು.
ಇನ್ನು ನಮ್ಮ ಸೇನೆಯು ಪಾಕ್ನ ಯಾವುದೇ ಮಸೀದಿಗಳನ್ನು ಟಾರ್ಗೆಟ್ ಮಾಡಿಲ್ಲ. ಕೇವಲ ಪಾಕ್ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ. ಎಲ್ಲಾ ಸಮಯದಲ್ಲೂ ನಮ್ಮ ಸೇನೆ ಅಲರ್ಟ್ ಆಗಿ ಇರಲಿದ್ದು, ಪಾಕ್ ದಾಳಿಗೆ ಪ್ರತೀದಾಳಿ ಮಾಡಲು ಸಿದ್ಧವಿದೆ ಎಂದು ಹೇಳಿದರು.





