ನಮ್ಮ ಪ್ರತೀದಾಳಿಯಿಂದ ಪಾಕ್‌ ಸೇನೆಗೆ ಅಪಾರ ನಷ್ಟ: ಸೋಫಿಯಾ ಖುರೇಷಿ

ನವದೆಹಲಿ: ನಮ್ಮ ದೇಶದ ವಿರುದ್ಧ ಪಾಕ್‌ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ ಎಂದು ಕರ್ನಲ್‌ ಸೋಫಿಯಾ ಖುರೇಷಿ ಹೇಳಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಕದನ ವಿರಾಮದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.‌400 ಕ್ಷಿಪಣಿ, ಬ್ರಹ್ಮೋಸ್‌ ನೆಲೆ ನಾಶವಾಗಿಲ್ಲ. ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಚಂಡೀಗಢದಲ್ಲಿ ಪಾಕ್‌ ಶೆಲ್‌ ಮೇಲೆ ದಾಳಿ ಮಾಡಿರೋದು ಸುಳ್ಳು ಸುದ್ದಿಯಾಗಿದೆ. ಭಾರತೀಯ ಸೇನೆಯು ಪಾಕಿಸ್ತಾನದ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತೀಯ ಸೇನೆಯು ಕೇವಲ ಪಾಕ್‌ನ ಸೇನಾವಲಯಗಳನ್ನು ಗುರಿ ಮಾಡಿ ದಾಳಿ ಮಾಡಿದೆ. ನಮ್ಮ ದಾಳಿಯಿಂದ ಪಾಕಿಸ್ತಾನ ಸೇನೆಗೆ ಸಾಕಷ್ಟು ನಷ್ಟವಾಗಿದೆ ಎಂದು ಹೇಳಿದರು.

ಇನ್ನು ನಮ್ಮ ಸೇನೆಯು ಪಾಕ್‌ನ ಯಾವುದೇ ಮಸೀದಿಗಳನ್ನು ಟಾರ್ಗೆಟ್‌ ಮಾಡಿಲ್ಲ. ಕೇವಲ ಪಾಕ್‌ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ. ಎಲ್ಲಾ ಸಮಯದಲ್ಲೂ ನಮ್ಮ ಸೇನೆ ಅಲರ್ಟ್‌ ಆಗಿ ಇರಲಿದ್ದು, ಪಾಕ್‌ ದಾಳಿಗೆ ಪ್ರತೀದಾಳಿ ಮಾಡಲು ಸಿದ್ಧವಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

51 mins ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

59 mins ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

1 hour ago

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

3 hours ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

14 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

17 hours ago