ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ.
ಬುರ್ದ್ವಾನ್ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಸೌರವ್ ಗಂಗೂಲಿ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ಲಾರಿಯೊಂದು ಅವರ ಕಾರಿಗೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಸೌರವ್ ಗಂಗೂಲಿ ಅವರ ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ನಡೆದ ಬಳಿ ಸ್ವಲ್ಪ ಹೊತ್ತು ರಸ್ತೆಯಲ್ಲಿ ಕಾದ ನಂತರ ಗಂಗೂಲಿ ಬೇರೆ ವಾಹನದಲ್ಲಿ ಸಮಾರಂಭಕ್ಕೆ ತೆರಳಿದ್ದಾರೆ. ದಾರಿಯಲ್ಲಿ ಅಪಘಾತದಿಂದಾಗಿ ಆತಂಕಕ್ಕೊಳಗಾಗಿದ್ದರೂ ಸೌರವ್ ಗಂಗೂಲಿ ಅವರು ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ ಎನ್ನಲಾಗಿದೆ.
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…
ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…