ದೇಶ- ವಿದೇಶ

ಅಯೋಧ್ಯೆ ಗೆಲುವಿನ ಬಗ್ಗೆ ಕವಿತೆ ಹೇಳಿ ಬಿಜೆಪಿಗೆ ಟಾಂಗ್‌ ಕೊಟ್ಟ ಅಖಿಲೇಶ್‌ ಯಾದವ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಖಿಲೇಶ್‌ ಯಾದವ್‌ ಅಯೋಧ್ಯೆಯ ಕುರಿತು ಕವಿತೆಯೊಂದನ್ನು ಹೇಳಿದರು.

ಕವಿತೆಯ ಪ್ರತಿಯೊಂದು ಸಾಲುಗಳನ್ನು ಕೇಂದ್ರ ಸರ್ಕಾರವನ್ನು ಗುರಿಯಾಗಿ ಬರೆದುಕೊಂಡು ಬಂದಂತೆ ಕಾಣಿಸುತ್ತಿತ್ತು. ಅಯೋಧ್ಯೆಯಿಂದ ಸಂಸದರಾಗಿ ಆಯ್ಕೆಯಾಗಿರುವ ಸಂಸದ ಅವಧೇಶ್‌ ಪ್ರಸಾದ್‌ ಅವರನ್ನು ಕವಿತೆಯಲ್ಲಿ ಹೀರೋನನ್ನಾಗಿ ಮಾಡಲಾಗಿತ್ತು. ಸದನದಲ್ಲಿ ಅವಧೇಶ್‌ ಪ್ರಸಾದ್‌ ಅವರನ್ನು ನೋಡುತ್ತಲೇ ಅಖಿಲೇಶ್‌ ಯಾದವ್‌ ಕವಿತೆಯ ವಾಚನ ಮಾಡಿದರು. ಈ ಮಧ್ಯೆ ಐಎನ್‌ಡಿಐಎ ಸಂಸದರು ಅವಧೇಶ್‌ ಪ್ರಸಾದ್‌ ಪರ ಘೋಷಣೆಗಳನ್ನು ಕೂಗಿದರು.

ನಮಗೆ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಭೂತಪೂರ್ವ ಗೆಲುವು ಸಿಕ್ಕಿದೆ. ಅದು ಏನು ಎಂದು ಸರ್ಕಾರ ರಚನೆ ಮಾಡಿರೋರಿಗೆ ಖಂಡಿತಾ ತಿಳಿದಿರುತ್ತದೆ. ಅಯೋಧ್ಯೆಯ ಗೆಲುವು ಭಾರತದ ಪ್ರಬುದ್ಧ ಮತದಾರರ ಪ್ರಜಾಪ್ರಭುತ್ವದ ತಿಳುವಳಿಕೆಗೆ ಸಂದ ಜಯವಾಗಿದೆ ಎಂದು ಅಖಿಲೇಶ್‌ ಯಾದವ್‌ ಅರ್ಥೈಸಿದರು.

ನಾವು ರಾಮ ರಚಿಸಿದ ರೇಖೆ ಎಂಬ ಮಾತನ್ನು ಹಿಂದಿನಿಂದಲೂ ಕೇಳಿಕೊಂಡು ಬಂದಿದ್ದೇವೆ. ಅಯೋಧ್ಯೆಯ ಗೆಲುವು ಸಂಪೂರ್ಣ ಶ್ರೀರಾಮನ ನಿರ್ಧಾರವಾಗಿದೆ ಎಂದು ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ್ದಾರೆ.

ಮತ್ತೆ ತಮ್ಮ ಮಾತು ಮುಂದುವರಿಸಿದ ಅಖಿಲೇಶ್‌ ಯಾದವ್‌ ಅವರು, ಇವರು ಒಳ್ಳೆಯ ಮನಸ್ಸಿನಿಂದ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾರೆ. ಇದು ಅಸತ್ಯದ ಮೇಲಿನ ಸತ್ಯದ ಜಯವಾಗಿದೆ. ತುಂಬಿ ಹರಿಯುತ್ತಿರುವ ನದಿಗೆ ಮರ್ಯಾದೆಯ ಘನತೆಯನ್ನು ಕಟ್ಟಿದವರು ಮರ್ಯಾದಾ ಪುರುಷೋತ್ತಮ ಪ್ರಭು ರಾಮ. ನಾವು ನಿಮಗೆಲ್ಲರಿಗೂ ಅಯೋಧ್ಯೆಯಿಂದ ಪ್ರೀತಿಯ ಸಂದೇಶ ತಂದಿದ್ದೇವೆ ಎಂದು ಹೇಳಿದರು.

ಬಳಿಕ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಸಿಕ್ಕ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಖಿಲೇಶ್‌ ಯಾದವ್‌ ಅವರು, ಇವಿಎಂ ಹೇಗೆ ಕೆಲಸ ಮಾಡುತ್ತೆ ಎಂಬುದರ ಬಗ್ಗೆ ನನಗೆ ತಿಳಿಯುತ್ತಿಲ್ಲ. ಈಗ ಇವಿಎಂ ಬಗ್ಗೆ ಏನನ್ನೂ ಹೇಳಲು ಉಳಿದಿಲ್ಲ. ಐಎನ್‌ಡಿಐಎ ಒಕ್ಕೂಟ ಲೋಕಸಭಾ  ಮುಂಬರುವ ಚುನಾವಣೆಯಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

9 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

9 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

9 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

9 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

10 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

10 hours ago