ದೇಶ- ವಿದೇಶ

ಅಯೋಧ್ಯೆ ಗೆಲುವಿನ ಬಗ್ಗೆ ಕವಿತೆ ಹೇಳಿ ಬಿಜೆಪಿಗೆ ಟಾಂಗ್‌ ಕೊಟ್ಟ ಅಖಿಲೇಶ್‌ ಯಾದವ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಖಿಲೇಶ್‌ ಯಾದವ್‌ ಅಯೋಧ್ಯೆಯ ಕುರಿತು ಕವಿತೆಯೊಂದನ್ನು ಹೇಳಿದರು.

ಕವಿತೆಯ ಪ್ರತಿಯೊಂದು ಸಾಲುಗಳನ್ನು ಕೇಂದ್ರ ಸರ್ಕಾರವನ್ನು ಗುರಿಯಾಗಿ ಬರೆದುಕೊಂಡು ಬಂದಂತೆ ಕಾಣಿಸುತ್ತಿತ್ತು. ಅಯೋಧ್ಯೆಯಿಂದ ಸಂಸದರಾಗಿ ಆಯ್ಕೆಯಾಗಿರುವ ಸಂಸದ ಅವಧೇಶ್‌ ಪ್ರಸಾದ್‌ ಅವರನ್ನು ಕವಿತೆಯಲ್ಲಿ ಹೀರೋನನ್ನಾಗಿ ಮಾಡಲಾಗಿತ್ತು. ಸದನದಲ್ಲಿ ಅವಧೇಶ್‌ ಪ್ರಸಾದ್‌ ಅವರನ್ನು ನೋಡುತ್ತಲೇ ಅಖಿಲೇಶ್‌ ಯಾದವ್‌ ಕವಿತೆಯ ವಾಚನ ಮಾಡಿದರು. ಈ ಮಧ್ಯೆ ಐಎನ್‌ಡಿಐಎ ಸಂಸದರು ಅವಧೇಶ್‌ ಪ್ರಸಾದ್‌ ಪರ ಘೋಷಣೆಗಳನ್ನು ಕೂಗಿದರು.

ನಮಗೆ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಭೂತಪೂರ್ವ ಗೆಲುವು ಸಿಕ್ಕಿದೆ. ಅದು ಏನು ಎಂದು ಸರ್ಕಾರ ರಚನೆ ಮಾಡಿರೋರಿಗೆ ಖಂಡಿತಾ ತಿಳಿದಿರುತ್ತದೆ. ಅಯೋಧ್ಯೆಯ ಗೆಲುವು ಭಾರತದ ಪ್ರಬುದ್ಧ ಮತದಾರರ ಪ್ರಜಾಪ್ರಭುತ್ವದ ತಿಳುವಳಿಕೆಗೆ ಸಂದ ಜಯವಾಗಿದೆ ಎಂದು ಅಖಿಲೇಶ್‌ ಯಾದವ್‌ ಅರ್ಥೈಸಿದರು.

ನಾವು ರಾಮ ರಚಿಸಿದ ರೇಖೆ ಎಂಬ ಮಾತನ್ನು ಹಿಂದಿನಿಂದಲೂ ಕೇಳಿಕೊಂಡು ಬಂದಿದ್ದೇವೆ. ಅಯೋಧ್ಯೆಯ ಗೆಲುವು ಸಂಪೂರ್ಣ ಶ್ರೀರಾಮನ ನಿರ್ಧಾರವಾಗಿದೆ ಎಂದು ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ್ದಾರೆ.

ಮತ್ತೆ ತಮ್ಮ ಮಾತು ಮುಂದುವರಿಸಿದ ಅಖಿಲೇಶ್‌ ಯಾದವ್‌ ಅವರು, ಇವರು ಒಳ್ಳೆಯ ಮನಸ್ಸಿನಿಂದ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾರೆ. ಇದು ಅಸತ್ಯದ ಮೇಲಿನ ಸತ್ಯದ ಜಯವಾಗಿದೆ. ತುಂಬಿ ಹರಿಯುತ್ತಿರುವ ನದಿಗೆ ಮರ್ಯಾದೆಯ ಘನತೆಯನ್ನು ಕಟ್ಟಿದವರು ಮರ್ಯಾದಾ ಪುರುಷೋತ್ತಮ ಪ್ರಭು ರಾಮ. ನಾವು ನಿಮಗೆಲ್ಲರಿಗೂ ಅಯೋಧ್ಯೆಯಿಂದ ಪ್ರೀತಿಯ ಸಂದೇಶ ತಂದಿದ್ದೇವೆ ಎಂದು ಹೇಳಿದರು.

ಬಳಿಕ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಸಿಕ್ಕ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಖಿಲೇಶ್‌ ಯಾದವ್‌ ಅವರು, ಇವಿಎಂ ಹೇಗೆ ಕೆಲಸ ಮಾಡುತ್ತೆ ಎಂಬುದರ ಬಗ್ಗೆ ನನಗೆ ತಿಳಿಯುತ್ತಿಲ್ಲ. ಈಗ ಇವಿಎಂ ಬಗ್ಗೆ ಏನನ್ನೂ ಹೇಳಲು ಉಳಿದಿಲ್ಲ. ಐಎನ್‌ಡಿಐಎ ಒಕ್ಕೂಟ ಲೋಕಸಭಾ  ಮುಂಬರುವ ಚುನಾವಣೆಯಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

5 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

6 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

6 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

6 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

7 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

7 hours ago