ದೇಶ- ವಿದೇಶ

ಅಯೋಧ್ಯೆ ಗೆಲುವಿನ ಬಗ್ಗೆ ಕವಿತೆ ಹೇಳಿ ಬಿಜೆಪಿಗೆ ಟಾಂಗ್‌ ಕೊಟ್ಟ ಅಖಿಲೇಶ್‌ ಯಾದವ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಖಿಲೇಶ್‌ ಯಾದವ್‌ ಅಯೋಧ್ಯೆಯ ಕುರಿತು ಕವಿತೆಯೊಂದನ್ನು ಹೇಳಿದರು.

ಕವಿತೆಯ ಪ್ರತಿಯೊಂದು ಸಾಲುಗಳನ್ನು ಕೇಂದ್ರ ಸರ್ಕಾರವನ್ನು ಗುರಿಯಾಗಿ ಬರೆದುಕೊಂಡು ಬಂದಂತೆ ಕಾಣಿಸುತ್ತಿತ್ತು. ಅಯೋಧ್ಯೆಯಿಂದ ಸಂಸದರಾಗಿ ಆಯ್ಕೆಯಾಗಿರುವ ಸಂಸದ ಅವಧೇಶ್‌ ಪ್ರಸಾದ್‌ ಅವರನ್ನು ಕವಿತೆಯಲ್ಲಿ ಹೀರೋನನ್ನಾಗಿ ಮಾಡಲಾಗಿತ್ತು. ಸದನದಲ್ಲಿ ಅವಧೇಶ್‌ ಪ್ರಸಾದ್‌ ಅವರನ್ನು ನೋಡುತ್ತಲೇ ಅಖಿಲೇಶ್‌ ಯಾದವ್‌ ಕವಿತೆಯ ವಾಚನ ಮಾಡಿದರು. ಈ ಮಧ್ಯೆ ಐಎನ್‌ಡಿಐಎ ಸಂಸದರು ಅವಧೇಶ್‌ ಪ್ರಸಾದ್‌ ಪರ ಘೋಷಣೆಗಳನ್ನು ಕೂಗಿದರು.

ನಮಗೆ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಭೂತಪೂರ್ವ ಗೆಲುವು ಸಿಕ್ಕಿದೆ. ಅದು ಏನು ಎಂದು ಸರ್ಕಾರ ರಚನೆ ಮಾಡಿರೋರಿಗೆ ಖಂಡಿತಾ ತಿಳಿದಿರುತ್ತದೆ. ಅಯೋಧ್ಯೆಯ ಗೆಲುವು ಭಾರತದ ಪ್ರಬುದ್ಧ ಮತದಾರರ ಪ್ರಜಾಪ್ರಭುತ್ವದ ತಿಳುವಳಿಕೆಗೆ ಸಂದ ಜಯವಾಗಿದೆ ಎಂದು ಅಖಿಲೇಶ್‌ ಯಾದವ್‌ ಅರ್ಥೈಸಿದರು.

ನಾವು ರಾಮ ರಚಿಸಿದ ರೇಖೆ ಎಂಬ ಮಾತನ್ನು ಹಿಂದಿನಿಂದಲೂ ಕೇಳಿಕೊಂಡು ಬಂದಿದ್ದೇವೆ. ಅಯೋಧ್ಯೆಯ ಗೆಲುವು ಸಂಪೂರ್ಣ ಶ್ರೀರಾಮನ ನಿರ್ಧಾರವಾಗಿದೆ ಎಂದು ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ್ದಾರೆ.

ಮತ್ತೆ ತಮ್ಮ ಮಾತು ಮುಂದುವರಿಸಿದ ಅಖಿಲೇಶ್‌ ಯಾದವ್‌ ಅವರು, ಇವರು ಒಳ್ಳೆಯ ಮನಸ್ಸಿನಿಂದ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾರೆ. ಇದು ಅಸತ್ಯದ ಮೇಲಿನ ಸತ್ಯದ ಜಯವಾಗಿದೆ. ತುಂಬಿ ಹರಿಯುತ್ತಿರುವ ನದಿಗೆ ಮರ್ಯಾದೆಯ ಘನತೆಯನ್ನು ಕಟ್ಟಿದವರು ಮರ್ಯಾದಾ ಪುರುಷೋತ್ತಮ ಪ್ರಭು ರಾಮ. ನಾವು ನಿಮಗೆಲ್ಲರಿಗೂ ಅಯೋಧ್ಯೆಯಿಂದ ಪ್ರೀತಿಯ ಸಂದೇಶ ತಂದಿದ್ದೇವೆ ಎಂದು ಹೇಳಿದರು.

ಬಳಿಕ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಸಿಕ್ಕ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಖಿಲೇಶ್‌ ಯಾದವ್‌ ಅವರು, ಇವಿಎಂ ಹೇಗೆ ಕೆಲಸ ಮಾಡುತ್ತೆ ಎಂಬುದರ ಬಗ್ಗೆ ನನಗೆ ತಿಳಿಯುತ್ತಿಲ್ಲ. ಈಗ ಇವಿಎಂ ಬಗ್ಗೆ ಏನನ್ನೂ ಹೇಳಲು ಉಳಿದಿಲ್ಲ. ಐಎನ್‌ಡಿಐಎ ಒಕ್ಕೂಟ ಲೋಕಸಭಾ  ಮುಂಬರುವ ಚುನಾವಣೆಯಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

25 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

1 hour ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

2 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

4 hours ago