ದೇಶ- ವಿದೇಶ

ಅಯೋಧ್ಯೆ ಗೆಲುವಿನ ಬಗ್ಗೆ ಕವಿತೆ ಹೇಳಿ ಬಿಜೆಪಿಗೆ ಟಾಂಗ್‌ ಕೊಟ್ಟ ಅಖಿಲೇಶ್‌ ಯಾದವ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಖಿಲೇಶ್‌ ಯಾದವ್‌ ಅಯೋಧ್ಯೆಯ ಕುರಿತು ಕವಿತೆಯೊಂದನ್ನು ಹೇಳಿದರು.

ಕವಿತೆಯ ಪ್ರತಿಯೊಂದು ಸಾಲುಗಳನ್ನು ಕೇಂದ್ರ ಸರ್ಕಾರವನ್ನು ಗುರಿಯಾಗಿ ಬರೆದುಕೊಂಡು ಬಂದಂತೆ ಕಾಣಿಸುತ್ತಿತ್ತು. ಅಯೋಧ್ಯೆಯಿಂದ ಸಂಸದರಾಗಿ ಆಯ್ಕೆಯಾಗಿರುವ ಸಂಸದ ಅವಧೇಶ್‌ ಪ್ರಸಾದ್‌ ಅವರನ್ನು ಕವಿತೆಯಲ್ಲಿ ಹೀರೋನನ್ನಾಗಿ ಮಾಡಲಾಗಿತ್ತು. ಸದನದಲ್ಲಿ ಅವಧೇಶ್‌ ಪ್ರಸಾದ್‌ ಅವರನ್ನು ನೋಡುತ್ತಲೇ ಅಖಿಲೇಶ್‌ ಯಾದವ್‌ ಕವಿತೆಯ ವಾಚನ ಮಾಡಿದರು. ಈ ಮಧ್ಯೆ ಐಎನ್‌ಡಿಐಎ ಸಂಸದರು ಅವಧೇಶ್‌ ಪ್ರಸಾದ್‌ ಪರ ಘೋಷಣೆಗಳನ್ನು ಕೂಗಿದರು.

ನಮಗೆ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಭೂತಪೂರ್ವ ಗೆಲುವು ಸಿಕ್ಕಿದೆ. ಅದು ಏನು ಎಂದು ಸರ್ಕಾರ ರಚನೆ ಮಾಡಿರೋರಿಗೆ ಖಂಡಿತಾ ತಿಳಿದಿರುತ್ತದೆ. ಅಯೋಧ್ಯೆಯ ಗೆಲುವು ಭಾರತದ ಪ್ರಬುದ್ಧ ಮತದಾರರ ಪ್ರಜಾಪ್ರಭುತ್ವದ ತಿಳುವಳಿಕೆಗೆ ಸಂದ ಜಯವಾಗಿದೆ ಎಂದು ಅಖಿಲೇಶ್‌ ಯಾದವ್‌ ಅರ್ಥೈಸಿದರು.

ನಾವು ರಾಮ ರಚಿಸಿದ ರೇಖೆ ಎಂಬ ಮಾತನ್ನು ಹಿಂದಿನಿಂದಲೂ ಕೇಳಿಕೊಂಡು ಬಂದಿದ್ದೇವೆ. ಅಯೋಧ್ಯೆಯ ಗೆಲುವು ಸಂಪೂರ್ಣ ಶ್ರೀರಾಮನ ನಿರ್ಧಾರವಾಗಿದೆ ಎಂದು ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ್ದಾರೆ.

ಮತ್ತೆ ತಮ್ಮ ಮಾತು ಮುಂದುವರಿಸಿದ ಅಖಿಲೇಶ್‌ ಯಾದವ್‌ ಅವರು, ಇವರು ಒಳ್ಳೆಯ ಮನಸ್ಸಿನಿಂದ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾರೆ. ಇದು ಅಸತ್ಯದ ಮೇಲಿನ ಸತ್ಯದ ಜಯವಾಗಿದೆ. ತುಂಬಿ ಹರಿಯುತ್ತಿರುವ ನದಿಗೆ ಮರ್ಯಾದೆಯ ಘನತೆಯನ್ನು ಕಟ್ಟಿದವರು ಮರ್ಯಾದಾ ಪುರುಷೋತ್ತಮ ಪ್ರಭು ರಾಮ. ನಾವು ನಿಮಗೆಲ್ಲರಿಗೂ ಅಯೋಧ್ಯೆಯಿಂದ ಪ್ರೀತಿಯ ಸಂದೇಶ ತಂದಿದ್ದೇವೆ ಎಂದು ಹೇಳಿದರು.

ಬಳಿಕ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಸಿಕ್ಕ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಖಿಲೇಶ್‌ ಯಾದವ್‌ ಅವರು, ಇವಿಎಂ ಹೇಗೆ ಕೆಲಸ ಮಾಡುತ್ತೆ ಎಂಬುದರ ಬಗ್ಗೆ ನನಗೆ ತಿಳಿಯುತ್ತಿಲ್ಲ. ಈಗ ಇವಿಎಂ ಬಗ್ಗೆ ಏನನ್ನೂ ಹೇಳಲು ಉಳಿದಿಲ್ಲ. ಐಎನ್‌ಡಿಐಎ ಒಕ್ಕೂಟ ಲೋಕಸಭಾ  ಮುಂಬರುವ ಚುನಾವಣೆಯಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈಶ್ವರ್‌ ಖಂಡ್ರೆ

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

6 hours ago

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

6 hours ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

8 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

8 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

10 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

10 hours ago