ದೇಶ- ವಿದೇಶ

ಅಯೋಧ್ಯೆ ಗೆಲುವಿನ ಬಗ್ಗೆ ಕವಿತೆ ಹೇಳಿ ಬಿಜೆಪಿಗೆ ಟಾಂಗ್‌ ಕೊಟ್ಟ ಅಖಿಲೇಶ್‌ ಯಾದವ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಖಿಲೇಶ್‌ ಯಾದವ್‌ ಅಯೋಧ್ಯೆಯ ಕುರಿತು ಕವಿತೆಯೊಂದನ್ನು ಹೇಳಿದರು.

ಕವಿತೆಯ ಪ್ರತಿಯೊಂದು ಸಾಲುಗಳನ್ನು ಕೇಂದ್ರ ಸರ್ಕಾರವನ್ನು ಗುರಿಯಾಗಿ ಬರೆದುಕೊಂಡು ಬಂದಂತೆ ಕಾಣಿಸುತ್ತಿತ್ತು. ಅಯೋಧ್ಯೆಯಿಂದ ಸಂಸದರಾಗಿ ಆಯ್ಕೆಯಾಗಿರುವ ಸಂಸದ ಅವಧೇಶ್‌ ಪ್ರಸಾದ್‌ ಅವರನ್ನು ಕವಿತೆಯಲ್ಲಿ ಹೀರೋನನ್ನಾಗಿ ಮಾಡಲಾಗಿತ್ತು. ಸದನದಲ್ಲಿ ಅವಧೇಶ್‌ ಪ್ರಸಾದ್‌ ಅವರನ್ನು ನೋಡುತ್ತಲೇ ಅಖಿಲೇಶ್‌ ಯಾದವ್‌ ಕವಿತೆಯ ವಾಚನ ಮಾಡಿದರು. ಈ ಮಧ್ಯೆ ಐಎನ್‌ಡಿಐಎ ಸಂಸದರು ಅವಧೇಶ್‌ ಪ್ರಸಾದ್‌ ಪರ ಘೋಷಣೆಗಳನ್ನು ಕೂಗಿದರು.

ನಮಗೆ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಭೂತಪೂರ್ವ ಗೆಲುವು ಸಿಕ್ಕಿದೆ. ಅದು ಏನು ಎಂದು ಸರ್ಕಾರ ರಚನೆ ಮಾಡಿರೋರಿಗೆ ಖಂಡಿತಾ ತಿಳಿದಿರುತ್ತದೆ. ಅಯೋಧ್ಯೆಯ ಗೆಲುವು ಭಾರತದ ಪ್ರಬುದ್ಧ ಮತದಾರರ ಪ್ರಜಾಪ್ರಭುತ್ವದ ತಿಳುವಳಿಕೆಗೆ ಸಂದ ಜಯವಾಗಿದೆ ಎಂದು ಅಖಿಲೇಶ್‌ ಯಾದವ್‌ ಅರ್ಥೈಸಿದರು.

ನಾವು ರಾಮ ರಚಿಸಿದ ರೇಖೆ ಎಂಬ ಮಾತನ್ನು ಹಿಂದಿನಿಂದಲೂ ಕೇಳಿಕೊಂಡು ಬಂದಿದ್ದೇವೆ. ಅಯೋಧ್ಯೆಯ ಗೆಲುವು ಸಂಪೂರ್ಣ ಶ್ರೀರಾಮನ ನಿರ್ಧಾರವಾಗಿದೆ ಎಂದು ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ್ದಾರೆ.

ಮತ್ತೆ ತಮ್ಮ ಮಾತು ಮುಂದುವರಿಸಿದ ಅಖಿಲೇಶ್‌ ಯಾದವ್‌ ಅವರು, ಇವರು ಒಳ್ಳೆಯ ಮನಸ್ಸಿನಿಂದ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾರೆ. ಇದು ಅಸತ್ಯದ ಮೇಲಿನ ಸತ್ಯದ ಜಯವಾಗಿದೆ. ತುಂಬಿ ಹರಿಯುತ್ತಿರುವ ನದಿಗೆ ಮರ್ಯಾದೆಯ ಘನತೆಯನ್ನು ಕಟ್ಟಿದವರು ಮರ್ಯಾದಾ ಪುರುಷೋತ್ತಮ ಪ್ರಭು ರಾಮ. ನಾವು ನಿಮಗೆಲ್ಲರಿಗೂ ಅಯೋಧ್ಯೆಯಿಂದ ಪ್ರೀತಿಯ ಸಂದೇಶ ತಂದಿದ್ದೇವೆ ಎಂದು ಹೇಳಿದರು.

ಬಳಿಕ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಸಿಕ್ಕ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಖಿಲೇಶ್‌ ಯಾದವ್‌ ಅವರು, ಇವಿಎಂ ಹೇಗೆ ಕೆಲಸ ಮಾಡುತ್ತೆ ಎಂಬುದರ ಬಗ್ಗೆ ನನಗೆ ತಿಳಿಯುತ್ತಿಲ್ಲ. ಈಗ ಇವಿಎಂ ಬಗ್ಗೆ ಏನನ್ನೂ ಹೇಳಲು ಉಳಿದಿಲ್ಲ. ಐಎನ್‌ಡಿಐಎ ಒಕ್ಕೂಟ ಲೋಕಸಭಾ  ಮುಂಬರುವ ಚುನಾವಣೆಯಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

7 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

7 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

7 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

8 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

8 hours ago