ನವದೆಹಲಿ: ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಮಾಲೀಕತ್ವದ ಸ್ಪೇಸ್ ಎಕ್ಸ್ ಕಂಪನಿಯ ರಾಕೆಟ್ ಬಳಸಿ ಪ್ರಥಮ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೂ ಉಪಗ್ರಹವನ್ನು ಕಕ್ಷೆಗೆ ಸೇರಿಸಲು ಯೋಜನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವಧಿಯಲ್ಲಿ ಅವರ ಸ್ನೇಹಿತ ಮಸ್ಕ್ರೊಂದಿಗೆ ಇಸ್ರೋದ ಮೊಟ್ಟ ಮೊದಲ ಒಪ್ಪಂದವಾಗಿದೆ. ಇಸ್ರೋ ಹಾಗೂ ಸ್ಪೇಸ್ ಎಕ್ಸ್ ಮಧ್ಯೆ ಹಲವು ವಾಣಿಜ್ಯ ಸಹಯೋಗಗಳಲ್ಲಿ ಒಂದಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ನ ಅಧ್ಯಕ್ಷ ರಾಧಾಕೃಷ್ಣನ್ ದುರೈರಾಜ್ ಅವರು, ಸ್ಪೇಸ್ ಎಕ್ಸ್ನೊಂದಿಗೆ ಉಡಾವಣೆ ಮಾಡಲು ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಇಸ್ರೋದ ಉಪಗ್ರಹವನ್ನು ಸ್ಪೇಸ್ ಎಕ್ಸ್ನ ಫಾಲ್ಕನ್ 9 ರಾಕೆಟ್ನ್ನು ನಭಕ್ಕೆ ಒತ್ತೊಯ್ಯೊಯಲಿದ್ದು, ಅಮೆರಿಕಾದ ಕೇಪ್ ಕೆನವೆರಲ್ ಉಡಾವಣಾ ಕೇಂದ್ರದಿಂದ ಉಡಾವಣೆಯಾಗಲಿದೆ. ಈ ಉಡಾವಣೆಗೆ ಅಂದಾಜು 60-70 ಮಿಲಿಯನ್ ಡಾಲರ್ಗಳಷ್ಟು ವೆಚ್ಚ ತಗುಲಿದೆ. ಅಲ್ಲದೇ ಜಿಎಸ್ಎಟಿ-ಎನ್2 ಅಥವಾ ಜಿಎಸ್ಎಟಿ-20 ಹೆಸರಿನ ಉಪಗ್ರಹವು ಭಾರತದಲ್ಲಿ ಪ್ರಯಾಣಿಕರು ವಿಮಾನಗಳಲ್ಲಿ ಪ್ರಯಾಣಿಸುವಾಗ ಇಂಟರ್ನೆಟ್ ಸೇವೆಗಳನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.
ಆದಾಗ್ಯೂ ಭಾರತದಲ್ಲಿ ವಿಮಾನದಲ್ಲಿ ಪ್ರಯಾಣಿಸುವಾಗ ಇಂಟರ್ನೆಟ್ ಸೇವೆಗೆ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಅಲ್ಲದೇ ಈ ಸೇವೆಯನ್ನು ಒದಗಿಸುವ ವಿಮಾನಯಾನ ಸಂಸ್ಥೆಗಳು ಭಾರತೀಯ ವಾಯುಪ್ರದೇಶದ ಮೇಲೆ ಹಾರುವಾಗ ಅದನ್ನು ನಿಷ್ಕ್ರಿಯಗೊಳಿಸಬೇಕಾಗುತ್ತದೆ. ಹೀಗಾಗಿ ಭಾರತ ಸರ್ಕಾರವು ನವೆಂಬರ್.4 ರಂದು ನಿಯಮಗಳನ್ನು ತಿದ್ದುಪಡಿ ಮಾಡಿದ್ದು, ಭಾರತೀಯ ವಾಯುಪ್ರದೇಶ ಒಳಗಡೆ ವಿಮಾನದಲ್ಲಿ 3,000 ಮೀಟರ್ ಎತ್ತರವನ್ನು ತಲುಪಲಿದೆ. ಬಳಿಕ ವಿಮಾನದಲ್ಲಿ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಲು ಅನುಮತಿ ನೀಡಿದಾಗ ಮಾತ್ರ ಪ್ರಯಾಣಿಕರು ವಿಮಾನದಲ್ಲಿ ವೈ-ಫೈ ಮುಖಾಂತರ ಇಂಟರ್ನೆಟ್ ಸೇವೆಗಳನ್ನು ಬಳಸಲು ಸಾಧ್ಯವಾಗಲಿದೆ ಎಂದು ಹೇಳಿದೆ.
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…