ಮಸ್ಕ್‌ ಜೊತೆ ಒಪ್ಪಂದ: ಪ್ರಥಮ ಬಾರಿಗೆ ಸ್ಪೇಸ್‌ ಎಕ್ಸ್‌ ರಾಕೆಟ್‌ನಲ್ಲಿ ಹಾರಲಿದೆ ಇಸ್ರೋ ಉಪಗ್ರಹ

ನವದೆಹಲಿ: ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಪ್ರಥಮ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೂ ಉಪಗ್ರಹವನ್ನು ಕಕ್ಷೆಗೆ ಸೇರಿಸಲು ಯೋಜನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವಧಿಯಲ್ಲಿ ಅವರ ಸ್ನೇಹಿತ ಮಸ್ಕ್‌ರೊಂದಿಗೆ ಇಸ್ರೋದ ಮೊಟ್ಟ ಮೊದಲ ಒಪ್ಪಂದವಾಗಿದೆ. ಇಸ್ರೋ ಹಾಗೂ ಸ್ಪೇಸ್‌ ಎಕ್ಸ್‌ ಮಧ್ಯೆ ಹಲವು ವಾಣಿಜ್ಯ ಸಹಯೋಗಗಳಲ್ಲಿ ಒಂದಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ನ ಅಧ್ಯಕ್ಷ ರಾಧಾಕೃಷ್ಣನ್‌ ದುರೈರಾಜ್‌ ಅವರು, ಸ್ಪೇಸ್‌ ಎಕ್ಸ್‌ನೊಂದಿಗೆ ಉಡಾವಣೆ ಮಾಡಲು ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೋದ ಉಪಗ್ರಹವನ್ನು ಸ್ಪೇಸ್‌ ಎಕ್ಸ್‌ನ ಫಾಲ್ಕನ್‌ 9 ರಾಕೆಟ್‌ನ್ನು ನಭಕ್ಕೆ ಒತ್ತೊಯ್ಯೊಯಲಿದ್ದು, ಅಮೆರಿಕಾದ ಕೇಪ್‌ ಕೆನವೆರಲ್‌ ಉಡಾವಣಾ ಕೇಂದ್ರದಿಂದ ಉಡಾವಣೆಯಾಗಲಿದೆ. ಈ ಉಡಾವಣೆಗೆ ಅಂದಾಜು 60-70 ಮಿಲಿಯನ್‌ ಡಾಲರ್‌ಗಳಷ್ಟು ವೆಚ್ಚ ತಗುಲಿದೆ. ಅಲ್ಲದೇ ಜಿಎಸ್‌ಎಟಿ-ಎನ್‌2 ಅಥವಾ ಜಿಎಸ್‌ಎಟಿ-20 ಹೆಸರಿನ ಉಪಗ್ರಹವು ಭಾರತದಲ್ಲಿ ಪ್ರಯಾಣಿಕರು ವಿಮಾನಗಳಲ್ಲಿ ಪ್ರಯಾಣಿಸುವಾಗ ಇಂಟರ್‌ನೆಟ್‌ ಸೇವೆಗಳನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.

ಆದಾಗ್ಯೂ ಭಾರತದಲ್ಲಿ ವಿಮಾನದಲ್ಲಿ ಪ್ರಯಾಣಿಸುವಾಗ ಇಂಟರ್‌ನೆಟ್‌ ಸೇವೆಗೆ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಅಲ್ಲದೇ ಈ ಸೇವೆಯನ್ನು ಒದಗಿಸುವ ವಿಮಾನಯಾನ ಸಂಸ್ಥೆಗಳು ಭಾರತೀಯ ವಾಯುಪ್ರದೇಶದ ಮೇಲೆ ಹಾರುವಾಗ ಅದನ್ನು ನಿಷ್ಕ್ರಿಯಗೊಳಿಸಬೇಕಾಗುತ್ತದೆ. ಹೀಗಾಗಿ ಭಾರತ ಸರ್ಕಾರವು ನವೆಂಬರ್‌.4 ರಂದು ನಿಯಮಗಳನ್ನು ತಿದ್ದುಪಡಿ ಮಾಡಿದ್ದು, ಭಾರತೀಯ ವಾಯುಪ್ರದೇಶ ಒಳಗಡೆ ವಿಮಾನದಲ್ಲಿ 3,000 ಮೀಟರ್‌ ಎತ್ತರವನ್ನು ತಲುಪಲಿದೆ. ಬಳಿಕ ವಿಮಾನದಲ್ಲಿ ಎಲೆಕ್ಟ್ರಾನಿಕ್‌ ಸಾಧನಗಳನ್ನು ಬಳಸಲು ಅನುಮತಿ ನೀಡಿದಾಗ ಮಾತ್ರ ಪ್ರಯಾಣಿಕರು ವಿಮಾನದಲ್ಲಿ ವೈ-ಫೈ ಮುಖಾಂತರ ಇಂಟರ್‌ನೆಟ್‌ ಸೇವೆಗಳನ್ನು ಬಳಸಲು ಸಾಧ್ಯವಾಗಲಿದೆ ಎಂದು ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

5 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

6 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

6 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

6 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

6 hours ago