ಮಸ್ಕ್‌ ಜೊತೆ ಒಪ್ಪಂದ: ಪ್ರಥಮ ಬಾರಿಗೆ ಸ್ಪೇಸ್‌ ಎಕ್ಸ್‌ ರಾಕೆಟ್‌ನಲ್ಲಿ ಹಾರಲಿದೆ ಇಸ್ರೋ ಉಪಗ್ರಹ

ನವದೆಹಲಿ: ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಪ್ರಥಮ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೂ ಉಪಗ್ರಹವನ್ನು ಕಕ್ಷೆಗೆ ಸೇರಿಸಲು ಯೋಜನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವಧಿಯಲ್ಲಿ ಅವರ ಸ್ನೇಹಿತ ಮಸ್ಕ್‌ರೊಂದಿಗೆ ಇಸ್ರೋದ ಮೊಟ್ಟ ಮೊದಲ ಒಪ್ಪಂದವಾಗಿದೆ. ಇಸ್ರೋ ಹಾಗೂ ಸ್ಪೇಸ್‌ ಎಕ್ಸ್‌ ಮಧ್ಯೆ ಹಲವು ವಾಣಿಜ್ಯ ಸಹಯೋಗಗಳಲ್ಲಿ ಒಂದಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ರೋದ ವಾಣಿಜ್ಯ ವಿಭಾಗದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ನ ಅಧ್ಯಕ್ಷ ರಾಧಾಕೃಷ್ಣನ್‌ ದುರೈರಾಜ್‌ ಅವರು, ಸ್ಪೇಸ್‌ ಎಕ್ಸ್‌ನೊಂದಿಗೆ ಉಡಾವಣೆ ಮಾಡಲು ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೋದ ಉಪಗ್ರಹವನ್ನು ಸ್ಪೇಸ್‌ ಎಕ್ಸ್‌ನ ಫಾಲ್ಕನ್‌ 9 ರಾಕೆಟ್‌ನ್ನು ನಭಕ್ಕೆ ಒತ್ತೊಯ್ಯೊಯಲಿದ್ದು, ಅಮೆರಿಕಾದ ಕೇಪ್‌ ಕೆನವೆರಲ್‌ ಉಡಾವಣಾ ಕೇಂದ್ರದಿಂದ ಉಡಾವಣೆಯಾಗಲಿದೆ. ಈ ಉಡಾವಣೆಗೆ ಅಂದಾಜು 60-70 ಮಿಲಿಯನ್‌ ಡಾಲರ್‌ಗಳಷ್ಟು ವೆಚ್ಚ ತಗುಲಿದೆ. ಅಲ್ಲದೇ ಜಿಎಸ್‌ಎಟಿ-ಎನ್‌2 ಅಥವಾ ಜಿಎಸ್‌ಎಟಿ-20 ಹೆಸರಿನ ಉಪಗ್ರಹವು ಭಾರತದಲ್ಲಿ ಪ್ರಯಾಣಿಕರು ವಿಮಾನಗಳಲ್ಲಿ ಪ್ರಯಾಣಿಸುವಾಗ ಇಂಟರ್‌ನೆಟ್‌ ಸೇವೆಗಳನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.

ಆದಾಗ್ಯೂ ಭಾರತದಲ್ಲಿ ವಿಮಾನದಲ್ಲಿ ಪ್ರಯಾಣಿಸುವಾಗ ಇಂಟರ್‌ನೆಟ್‌ ಸೇವೆಗೆ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಅಲ್ಲದೇ ಈ ಸೇವೆಯನ್ನು ಒದಗಿಸುವ ವಿಮಾನಯಾನ ಸಂಸ್ಥೆಗಳು ಭಾರತೀಯ ವಾಯುಪ್ರದೇಶದ ಮೇಲೆ ಹಾರುವಾಗ ಅದನ್ನು ನಿಷ್ಕ್ರಿಯಗೊಳಿಸಬೇಕಾಗುತ್ತದೆ. ಹೀಗಾಗಿ ಭಾರತ ಸರ್ಕಾರವು ನವೆಂಬರ್‌.4 ರಂದು ನಿಯಮಗಳನ್ನು ತಿದ್ದುಪಡಿ ಮಾಡಿದ್ದು, ಭಾರತೀಯ ವಾಯುಪ್ರದೇಶ ಒಳಗಡೆ ವಿಮಾನದಲ್ಲಿ 3,000 ಮೀಟರ್‌ ಎತ್ತರವನ್ನು ತಲುಪಲಿದೆ. ಬಳಿಕ ವಿಮಾನದಲ್ಲಿ ಎಲೆಕ್ಟ್ರಾನಿಕ್‌ ಸಾಧನಗಳನ್ನು ಬಳಸಲು ಅನುಮತಿ ನೀಡಿದಾಗ ಮಾತ್ರ ಪ್ರಯಾಣಿಕರು ವಿಮಾನದಲ್ಲಿ ವೈ-ಫೈ ಮುಖಾಂತರ ಇಂಟರ್‌ನೆಟ್‌ ಸೇವೆಗಳನ್ನು ಬಳಸಲು ಸಾಧ್ಯವಾಗಲಿದೆ ಎಂದು ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago