ನವದೆಹಲಿ: ನಾಳೆ (ಭಾನುವಾರ, ಜೂನ್.9)ರಂದು ಸಂಜೆ 7.15 ಗಂಟೆಗೆ ನವದೆಹಲಿಯ ರಾಷ್ಟ್ರಪತಿ ಭವನ ಸಭಾಂಗಣದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹಲವಾರು ಗಣ್ಯರು, ವಿವಿಧ ರಾಷ್ಟ್ರಗಳ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಸೆಶೆಲ್ಸ್ನ ಉಪಾಧ್ಯಕ್ಷ ಅಹ್ಮದ್ ಅಫೀಫ್, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ನ ಮೊಹಮ್ಮದ್ ಮುಯಿಜ್ಜು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಭೂತಾನ್ನ ತ್ಶೆರಿಂಗ್ ತೊಬ್ಗೇ, ನೇಪಾಳದ ಪುಷ್ಪ ಕಮಲ್ ದಹಲ್ ಪ್ರಚಂಡ ಮತ್ತು ವಾರಿಷಸ್ನ ಪ್ರವಿಂದ್ ಕುವಾರ್ ಜುಗ್ನಾಥ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನವನ್ನು ನೀಡಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಪ್ರವಾಣ ವಚನ ಸವಾರಂಭದಲ್ಲಿ ಭಾಗವಹಿಸುವುದರ ಜೊತೆಗೆ, ಅದೇ ಸಂಜೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸುವ ಔತಣಕೂಟದಲ್ಲಿ ಈ ಎಲ್ಲಾ ನಾಯಕರು ಪಾಲ್ಗೊಳ್ಳಲಿದ್ದಾರೆ.
ಒಟ್ಟಾರೆಯಾಗಿ ಪ್ರಧಾನಿ ಮೋದಿ ಪ್ರಮಾಣ ವಚನಕ್ಕೆ ದೇಶದ, ವಿದೇಶ ಸೇರಿದಂತೆ ಒಟ್ಟು 8 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ.
ಇನ್ನು ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸವಾರಂಭಕ್ಕೆ ವಿವಿಧ ರಾಷ್ಟ್ರಗಳ ಗಣ್ಯರು ಆಗಮಿಸುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ. ಅಂದು (ಭಾನುವಾರ) ಬೆಳಗ್ಗಿನಿಂದಲೇ ದೆಹಲಿಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧಿಸಲಾಗಿದೆ. ಕಮಾಂಡೋ, ಶ್ವಾನದಳ ಸೇರಿದಂತೆ ವಿವಿಧ ಶ್ರೇಣಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಿಶೇಷ ಆಹ್ವಾನಿತರಿಗೆ ನಿಗದಿಪಡಿಸಲಾಗಿರುವ ಫೈವ್-ಸ್ಟಾರ್ ಹೋಟೆಲ್ಗಳಲ್ಲಿಯೂ ಹೆಚ್ಚಿನ ಸೆಕ್ಯೂರಿಟಿ ನಿಯೋಜಿಸಲಾಗಿದೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…