ನವದೆಹಲಿ: ನಾಳೆ (ಭಾನುವಾರ, ಜೂನ್.9)ರಂದು ಸಂಜೆ 7.15 ಗಂಟೆಗೆ ನವದೆಹಲಿಯ ರಾಷ್ಟ್ರಪತಿ ಭವನ ಸಭಾಂಗಣದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಹಲವಾರು ಗಣ್ಯರು, ವಿವಿಧ ರಾಷ್ಟ್ರಗಳ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಸೆಶೆಲ್ಸ್ನ ಉಪಾಧ್ಯಕ್ಷ ಅಹ್ಮದ್ ಅಫೀಫ್, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ನ ಮೊಹಮ್ಮದ್ ಮುಯಿಜ್ಜು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಭೂತಾನ್ನ ತ್ಶೆರಿಂಗ್ ತೊಬ್ಗೇ, ನೇಪಾಳದ ಪುಷ್ಪ ಕಮಲ್ ದಹಲ್ ಪ್ರಚಂಡ ಮತ್ತು ವಾರಿಷಸ್ನ ಪ್ರವಿಂದ್ ಕುವಾರ್ ಜುಗ್ನಾಥ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನವನ್ನು ನೀಡಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಪ್ರವಾಣ ವಚನ ಸವಾರಂಭದಲ್ಲಿ ಭಾಗವಹಿಸುವುದರ ಜೊತೆಗೆ, ಅದೇ ಸಂಜೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸುವ ಔತಣಕೂಟದಲ್ಲಿ ಈ ಎಲ್ಲಾ ನಾಯಕರು ಪಾಲ್ಗೊಳ್ಳಲಿದ್ದಾರೆ.
ಒಟ್ಟಾರೆಯಾಗಿ ಪ್ರಧಾನಿ ಮೋದಿ ಪ್ರಮಾಣ ವಚನಕ್ಕೆ ದೇಶದ, ವಿದೇಶ ಸೇರಿದಂತೆ ಒಟ್ಟು 8 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ.
ಇನ್ನು ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸವಾರಂಭಕ್ಕೆ ವಿವಿಧ ರಾಷ್ಟ್ರಗಳ ಗಣ್ಯರು ಆಗಮಿಸುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ. ಅಂದು (ಭಾನುವಾರ) ಬೆಳಗ್ಗಿನಿಂದಲೇ ದೆಹಲಿಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧಿಸಲಾಗಿದೆ. ಕಮಾಂಡೋ, ಶ್ವಾನದಳ ಸೇರಿದಂತೆ ವಿವಿಧ ಶ್ರೇಣಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಿಶೇಷ ಆಹ್ವಾನಿತರಿಗೆ ನಿಗದಿಪಡಿಸಲಾಗಿರುವ ಫೈವ್-ಸ್ಟಾರ್ ಹೋಟೆಲ್ಗಳಲ್ಲಿಯೂ ಹೆಚ್ಚಿನ ಸೆಕ್ಯೂರಿಟಿ ನಿಯೋಜಿಸಲಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…