ದೇಶ- ವಿದೇಶ

ಮೈಸೂರು ರೈಲ್ವೆ ಯೋಜನೆಗೆ ವೇಗ

ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಭೇಟಿ ಮಾಡಿದ ಸಂಸದ ಯದುವೀರ್

ಹೊಸದಿಲ್ಲಿ: ಮೈಸೂರಿನ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಸಂಸತ್ ಅಧಿವೇಶನದ ಸಂದರ್ಭದಲ್ಲಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಈ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ವಿಮಾನ ನಿಲ್ದಾಣ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ಕ್ರಮ ಕೈಗೊಳ್ಳಲು ಸೂಚನೆ ನೀಡುವುದಾಗಿ ಭರವಸೆ ನೀಡಿದರು. ವಿಮಾನ ನಿಲ್ದಾಣ ವಿಸ್ತರಣೆಗೆ ಬೇಕಿರುವ ೪೬ ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ಮನವಿ ಮಾಡುತ್ತೇನೆ. ಇದರಿಂದ ವಿಮಾನ ನಿಲ್ದಾಣ ವಿಸ್ತರಣೆ ಕಾರ್ಯ ತ್ವರಿತಗತಿಯಲ್ಲಿ ನಡೆಯಲಿದೆ ಎಂದು ಯದುವೀರ್ ಹೇಳಿದ್ದಾರೆ.

ಐತಿಹಾಸಿಕ ರೈಲು ನಿಲ್ದಾಣಕ್ಕೆ ಆಧುನಿಕ ಸ್ಪರ್ಶ:
ಪಾರಂಪರಿಕ ನಗರವಾಗಿರುವ ಮೈಸೂರಿನ ರೈಲ್ವೆ ನಿಲ್ದಾಣ ಐತಿಹಾಸಿಕ ಸ್ಥಳಗಳಲ್ಲಿ ಒಂದಾಗಿದೆ. ಇದರ ಆಧುನೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮಾಡಿದ ಮನವಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದರು. ಇದಕ್ಕೆ ಬೇಕಾಗಿರುವ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು ಎಂದು ವಿವರಿಸಿದ್ದಾರೆ.

ವಿನ್ಯಾಸ ಅಂತಿಮಗೊಳಿಸಲಿರುವ ಸಂಸದರು: ಮೈಸೂರಿನ ರೈಲು ನಿಲ್ದಾಣದ ಆಧುನೀಕರಣಕ್ಕೆ ಸಂಬಂಽಸಿದಿಂತೆ ವಿನ್ಯಾಸವನ್ನು ನಾನು ಅಂತಿಮಗೊಳಿಸುತ್ತಿದ್ದೇನೆ. ಇದಕ್ಕೆ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಅತಿ ಶೀಘ್ರದಲ್ಲೇ ಮೈಸೂರಿನಲ್ಲಿ ಬಹುತೇಕ ಎಲ್ಲ ರೈಲ್ವೆ ಯೋಜನೆಗಳ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ನೂತನ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ ಎಂದು ಹೇಳಿದ್ದಾರೆ.

ಮೈಸೂರು ಹಾಗೂ ಕೊಡಗು ಕ್ಷೇತ್ರದ ಜನರ ಪರವಾಗಿ ನಾನು ಇದೇ ಸಂದರ್ಭದಲ್ಲಿ ರೈಲ್ವೆ ಸಚಿವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

3 mins ago

‘ಸರ್ಕಾರಿ ಪಿಯು ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ ಭಾಗ್ಯ’

ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ…

8 mins ago

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

7 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

8 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

8 hours ago