ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಭೇಟಿ ಮಾಡಿದ ಸಂಸದ ಯದುವೀರ್
ಹೊಸದಿಲ್ಲಿ: ಮೈಸೂರಿನ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಸಂಸತ್ ಅಧಿವೇಶನದ ಸಂದರ್ಭದಲ್ಲಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಈ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ವಿಮಾನ ನಿಲ್ದಾಣ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ಕ್ರಮ ಕೈಗೊಳ್ಳಲು ಸೂಚನೆ ನೀಡುವುದಾಗಿ ಭರವಸೆ ನೀಡಿದರು. ವಿಮಾನ ನಿಲ್ದಾಣ ವಿಸ್ತರಣೆಗೆ ಬೇಕಿರುವ ೪೬ ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ಮನವಿ ಮಾಡುತ್ತೇನೆ. ಇದರಿಂದ ವಿಮಾನ ನಿಲ್ದಾಣ ವಿಸ್ತರಣೆ ಕಾರ್ಯ ತ್ವರಿತಗತಿಯಲ್ಲಿ ನಡೆಯಲಿದೆ ಎಂದು ಯದುವೀರ್ ಹೇಳಿದ್ದಾರೆ.
ಐತಿಹಾಸಿಕ ರೈಲು ನಿಲ್ದಾಣಕ್ಕೆ ಆಧುನಿಕ ಸ್ಪರ್ಶ:
ಪಾರಂಪರಿಕ ನಗರವಾಗಿರುವ ಮೈಸೂರಿನ ರೈಲ್ವೆ ನಿಲ್ದಾಣ ಐತಿಹಾಸಿಕ ಸ್ಥಳಗಳಲ್ಲಿ ಒಂದಾಗಿದೆ. ಇದರ ಆಧುನೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮಾಡಿದ ಮನವಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದರು. ಇದಕ್ಕೆ ಬೇಕಾಗಿರುವ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು ಎಂದು ವಿವರಿಸಿದ್ದಾರೆ.
ವಿನ್ಯಾಸ ಅಂತಿಮಗೊಳಿಸಲಿರುವ ಸಂಸದರು: ಮೈಸೂರಿನ ರೈಲು ನಿಲ್ದಾಣದ ಆಧುನೀಕರಣಕ್ಕೆ ಸಂಬಂಽಸಿದಿಂತೆ ವಿನ್ಯಾಸವನ್ನು ನಾನು ಅಂತಿಮಗೊಳಿಸುತ್ತಿದ್ದೇನೆ. ಇದಕ್ಕೆ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ಅತಿ ಶೀಘ್ರದಲ್ಲೇ ಮೈಸೂರಿನಲ್ಲಿ ಬಹುತೇಕ ಎಲ್ಲ ರೈಲ್ವೆ ಯೋಜನೆಗಳ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ನೂತನ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ ಎಂದು ಹೇಳಿದ್ದಾರೆ.
ಮೈಸೂರು ಹಾಗೂ ಕೊಡಗು ಕ್ಷೇತ್ರದ ಜನರ ಪರವಾಗಿ ನಾನು ಇದೇ ಸಂದರ್ಭದಲ್ಲಿ ರೈಲ್ವೆ ಸಚಿವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…
ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…
ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ…