ಸತತ ಮೂರನೇ ಬಾರಿ ಬಾರ್ಡರ್- ಗವಾಸ್ಕರ್ ಟ್ರೋಫಿ ಉಳಿಸಿಕೊಂಡ ಭಾರತ
ಹೊಸದಿಲ್ಲಿ: ನಾಗಪುರದಲ್ಲಿ ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ ಇಂಡಿಯಾ, ದೆಹಲಿಯ ಫಿರೋಜ್ ಷಾ ಕೋಟ್ಲಾ ಅಂಗಳದಲ್ಲೂ ಮೂರೇ ದಿನದಲ್ಲಿ ಕಾಂಗರೂ ಪಡೆಯನ್ನು ಬಗ್ಗು ಬಡಿಯುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಈ ಮೂಲಕ ಭಾರತ ಆ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಜತೆಗೆ ಆಸ್ಟ್ರೇಲಿಯಾ ವಿರುದ್ಧ 100ನೇ ಟೆಸ್ಟ್ ಗೆಲುವು ದಾಖಲಿಸಿದೆ.
ರವೀಂದ್ರ ಜಡೇಜಾ ಅವರ ಮಾರಕ ಬೌಲಿಂಗ್ ದಾಳಿ (42ಕ್ಕೆ7)ಗೆ ಸಿಲುಕಿದ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ನಲ್ಲಿ 113 ರನ್ಗಳಿಗೆ ಆಲೌಟ್ ಆಗುವ ಮೂಲಕ ಭಾರತಕ್ಕೆ 115 ರನ್ಗಳ ಸಾಧಾರಣ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡ 4 ವಿಕೆಟ್ ಕಳೆದುಕೊಂಡು ಗುರಿಮುಟ್ಟುವ ಮೂಲಕ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
115 ರನ್ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ 20 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ 31 ರನ್ ಗಳಿಸುವ ಮೂಲಕ ತಂಡಕ್ಕೆ ಬಿರುಸಿನ ಆರಂಭ ನೀಡಿದರು. ಆದರೆ ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಬಾರಿ ರನೌಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಕೆಎಲ್ ರಾಹುಲ್ ಕೇವಲ 1 ರನ್ ಗಳಿಸಿ ಔಟಾಗುವ ಮೂಲಕ ಮತ್ತೆ ನಿರಾಸೆ ಮೂಡಿಸಿದರು.
31 ಎಸೆತಗಳಲ್ಲಿ 20 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಸ್ಟಂಪ್ಔಟ್ ಆದರು. 100ನೇ ಪಂದ್ಯವನ್ನಾಡುತ್ತಿರುವ ಚೇತೇಶ್ವರ ಪೂಜಾರ ತಾಳ್ಮೆಯ ಆಟದೊಂದಿಗೆ ಅಜೇಯ 31 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಶ್ರೇಯಸ್ ಅಯ್ಯರ್ 10 ಎಸೆತಗಳಲ್ಲಿ 12 ರನ್ ಗಳಿಸಿದರೆ, ವಿಕೆಟ್ ಕೀಪರ್ ಶ್ರೀಕರ್ ಭರತ್ 22 ಎಸೆತಗಳಲ್ಲಿ 3 ಬೌಂಡರಿ 1 ಭರ್ಜರಿ ಸಿಕ್ಸರ್ ಸಹಿತ 23 ರನ್ ಗಳಿಸಿ ಬೇಗನೆ ಪಂದ್ಯವನ್ನು ಮುಗಿಸಲು ಕಾರಣವಾದರು.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಪರ ಮೊಹಮ್ಮದ್ ಶಮಿ 4, ಅಶ್ವಿನ್ ಮತ್ತು ಜಡೇಜಾ ತಲಾ 3 ವಿಕೆಟ್ ಪಡೆದರೆ ಎರಡನೇ ಇನ್ನಿಂಗ್ಸ್ ನಲ್ಲಿ ರವೀಂದ್ರ ಜಡೇಜಾ 7 ವಿಕೆಟ್ ಪಡೆದು ಮಿಂಚಿದರು. ರವಿಚಂದ್ರನ್ ಅಶ್ವಿನ್ 3 ವಿಕೆಟ್ ಪಡೆದು ಆಸಿಸ್ ಪತನಕ್ಕೆ ಕಾರಣರಾದರು.
ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ಪರ ಹೆಡ್ (43 ರನ್) ಮತ್ತು ಲಾಬುಶ್ಚಾಗ್ನೆ (36ರನ್) ಹೊರತು ಪಡಿಸಿದರೆ ಇನ್ನಾವ ಆಟಗಾರರೂ ಎರಡಂಕಿ ಮೊತ್ತ ದಾಟಲಿಲ್ಲ. 4 ಮಂದಿ ಬ್ಯಾಟರ್ ಗಳು ಶೂನ್ಯ ಸುತ್ತಿದ್ದು ಆಸಿಸ್ ಗೆ ಮಾರಕವಾಗಿ ಪರಿಣಮಿಸಿತು.
ಈ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 25,000 ಅಂತರಾಷ್ಟ್ರೀ ಯ ರನ್ ಗಳನ್ನು ಅತಿ ವೇಗವಾಗಿ ಗಳಿಸಿದ ಬ್ಯಾಟರ್ ಎನಿಸಿಕೊಂಡರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…