ಕರೂರು : ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ವಿಜಯ್ ಅವರದ್ದು ತಪ್ಪೇನಿಲ್ಲಾ ಎಂದಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರವನ್ನು ದೂಷಿಸಿದೆ.
ಭಾನುವಾರ ಕರೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.
ಇದನ್ನೂ ಓದಿ :-ಬೀದರ್ | ಮಳೆಯಿಂದ ಭಾರೀ ಹಾನಿ ; ವಿಶೇಷ ಪ್ಯಾಕೇಜ್ ಈಶ್ವರ ಖಂಡ್ರೆ ಮನವಿ
ಕಾಲ್ತುಳಿತ ದುರಂತಕ್ಕೆ ವಿಜಯ್ ಅವರದ್ದು ತಪ್ಪೇನಿಲ್ಲಾ, ಹೆಚ್ಚಿನ ಜನ ಸೇರುವುದನ್ನು ನಿರೀಕ್ಷಿಸಿ ರಾಜ್ಯ ಪೊಲೀಸರು ಮತ್ತು ಗುಪ್ತಚರ ಇಲಾಖೆ ಸಮರ್ಪಕವಾಗಿ ಪೋಲೀಸರನ್ನು ನಿಯೋಜಿಸಬೇಕಾಗಿತ್ತು. ಪೊಲೀಸರು ಯಾಕೆ 7 ಗಂಟೆ ಅನುಮತಿ ನೀಡಬೇಕಾಯಿತು? ಎರಡು ಗಂಟೆ ನೀಡಿದ್ದರೆ ಸಾಕಾಗಿತ್ತು ಎಂದು ಟೀಕಾ ಪ್ರಹಾರ ನಡೆಸಿದರು.
ತಮಿಳುನಾಡು ಬಿಜೆಪಿಯಾಗಿ ದುರಂತ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ. ಮಾಜಿ ನ್ಯಾಯಾಧೀಶರ ನೇತೃತ್ವದ ತನಿಖಾ ಆಯೋಗದಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಬಯಸಿದ್ದಾರೆ. ಇದರಿಂದ ಹೇಗೆ ನ್ಯಾಯಯುತ ತನಿಖೆ ನಡೆಯಲಿದೆ ಎಂದು ಅಣ್ಣಾಮಲೈ ಪ್ರಶ್ನಿಸಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…