ಕರೂರು : ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ವಿಜಯ್ ಅವರದ್ದು ತಪ್ಪೇನಿಲ್ಲಾ ಎಂದಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರವನ್ನು ದೂಷಿಸಿದೆ.
ಭಾನುವಾರ ಕರೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.
ಇದನ್ನೂ ಓದಿ :-ಬೀದರ್ | ಮಳೆಯಿಂದ ಭಾರೀ ಹಾನಿ ; ವಿಶೇಷ ಪ್ಯಾಕೇಜ್ ಈಶ್ವರ ಖಂಡ್ರೆ ಮನವಿ
ಕಾಲ್ತುಳಿತ ದುರಂತಕ್ಕೆ ವಿಜಯ್ ಅವರದ್ದು ತಪ್ಪೇನಿಲ್ಲಾ, ಹೆಚ್ಚಿನ ಜನ ಸೇರುವುದನ್ನು ನಿರೀಕ್ಷಿಸಿ ರಾಜ್ಯ ಪೊಲೀಸರು ಮತ್ತು ಗುಪ್ತಚರ ಇಲಾಖೆ ಸಮರ್ಪಕವಾಗಿ ಪೋಲೀಸರನ್ನು ನಿಯೋಜಿಸಬೇಕಾಗಿತ್ತು. ಪೊಲೀಸರು ಯಾಕೆ 7 ಗಂಟೆ ಅನುಮತಿ ನೀಡಬೇಕಾಯಿತು? ಎರಡು ಗಂಟೆ ನೀಡಿದ್ದರೆ ಸಾಕಾಗಿತ್ತು ಎಂದು ಟೀಕಾ ಪ್ರಹಾರ ನಡೆಸಿದರು.
ತಮಿಳುನಾಡು ಬಿಜೆಪಿಯಾಗಿ ದುರಂತ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ. ಮಾಜಿ ನ್ಯಾಯಾಧೀಶರ ನೇತೃತ್ವದ ತನಿಖಾ ಆಯೋಗದಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಬಯಸಿದ್ದಾರೆ. ಇದರಿಂದ ಹೇಗೆ ನ್ಯಾಯಯುತ ತನಿಖೆ ನಡೆಯಲಿದೆ ಎಂದು ಅಣ್ಣಾಮಲೈ ಪ್ರಶ್ನಿಸಿದರು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…