ಕರೂರು : ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ವಿಜಯ್ ಅವರದ್ದು ತಪ್ಪೇನಿಲ್ಲಾ ಎಂದಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರವನ್ನು ದೂಷಿಸಿದೆ.
ಭಾನುವಾರ ಕರೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.
ಇದನ್ನೂ ಓದಿ :-ಬೀದರ್ | ಮಳೆಯಿಂದ ಭಾರೀ ಹಾನಿ ; ವಿಶೇಷ ಪ್ಯಾಕೇಜ್ ಈಶ್ವರ ಖಂಡ್ರೆ ಮನವಿ
ಕಾಲ್ತುಳಿತ ದುರಂತಕ್ಕೆ ವಿಜಯ್ ಅವರದ್ದು ತಪ್ಪೇನಿಲ್ಲಾ, ಹೆಚ್ಚಿನ ಜನ ಸೇರುವುದನ್ನು ನಿರೀಕ್ಷಿಸಿ ರಾಜ್ಯ ಪೊಲೀಸರು ಮತ್ತು ಗುಪ್ತಚರ ಇಲಾಖೆ ಸಮರ್ಪಕವಾಗಿ ಪೋಲೀಸರನ್ನು ನಿಯೋಜಿಸಬೇಕಾಗಿತ್ತು. ಪೊಲೀಸರು ಯಾಕೆ 7 ಗಂಟೆ ಅನುಮತಿ ನೀಡಬೇಕಾಯಿತು? ಎರಡು ಗಂಟೆ ನೀಡಿದ್ದರೆ ಸಾಕಾಗಿತ್ತು ಎಂದು ಟೀಕಾ ಪ್ರಹಾರ ನಡೆಸಿದರು.
ತಮಿಳುನಾಡು ಬಿಜೆಪಿಯಾಗಿ ದುರಂತ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ. ಮಾಜಿ ನ್ಯಾಯಾಧೀಶರ ನೇತೃತ್ವದ ತನಿಖಾ ಆಯೋಗದಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಬಯಸಿದ್ದಾರೆ. ಇದರಿಂದ ಹೇಗೆ ನ್ಯಾಯಯುತ ತನಿಖೆ ನಡೆಯಲಿದೆ ಎಂದು ಅಣ್ಣಾಮಲೈ ಪ್ರಶ್ನಿಸಿದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…