ದೇಶ- ವಿದೇಶ

ಕಾಲ್ತುಳಿತ | ‌ ನಟ ವಿಜಯ್ ತಪ್ಪಿಲ್ಲ, ಡಿಎಂಕೆ ಸರ್ಕಾರ ದೂಷಿಸಿದೆ ಬಿಜೆಪಿ ; ಪರಿಹಾರ ಘೋಷಣೆ

ಕರೂರು : ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ವಿಜಯ್ ಅವರದ್ದು ತಪ್ಪೇನಿಲ್ಲಾ ಎಂದಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರವನ್ನು ದೂಷಿಸಿದೆ.

ಭಾನುವಾರ ಕರೂರಿಗೆ ಆಗಮಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.

ಇದನ್ನೂ ಓದಿ :-ಬೀದರ್‌ | ಮಳೆಯಿಂದ ಭಾರೀ ಹಾನಿ ; ವಿಶೇಷ ಪ್ಯಾಕೇಜ್ ಈಶ್ವರ ಖಂಡ್ರೆ ಮನವಿ

ಕಾಲ್ತುಳಿತ ದುರಂತಕ್ಕೆ ವಿಜಯ್ ಅವರದ್ದು ತಪ್ಪೇನಿಲ್ಲಾ, ಹೆಚ್ಚಿನ ಜನ ಸೇರುವುದನ್ನು ನಿರೀಕ್ಷಿಸಿ ರಾಜ್ಯ ಪೊಲೀಸರು ಮತ್ತು ಗುಪ್ತಚರ ಇಲಾಖೆ ಸಮರ್ಪಕವಾಗಿ ಪೋಲೀಸರನ್ನು ನಿಯೋಜಿಸಬೇಕಾಗಿತ್ತು. ಪೊಲೀಸರು ಯಾಕೆ 7 ಗಂಟೆ ಅನುಮತಿ ನೀಡಬೇಕಾಯಿತು? ಎರಡು ಗಂಟೆ ನೀಡಿದ್ದರೆ ಸಾಕಾಗಿತ್ತು ಎಂದು ಟೀಕಾ ಪ್ರಹಾರ ನಡೆಸಿದರು.

ತಮಿಳುನಾಡು ಬಿಜೆಪಿಯಾಗಿ ದುರಂತ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ. ಮಾಜಿ ನ್ಯಾಯಾಧೀಶರ ನೇತೃತ್ವದ ತನಿಖಾ ಆಯೋಗದಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಬಯಸಿದ್ದಾರೆ. ಇದರಿಂದ ಹೇಗೆ ನ್ಯಾಯಯುತ ತನಿಖೆ ನಡೆಯಲಿದೆ ಎಂದು ಅಣ್ಣಾಮಲೈ ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

25 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

33 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago