ದೇಶ- ವಿದೇಶ

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಮಂದಿ ಸಾವು

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಕುಂಭಮೇಳಕ್ಕೆ ಹೊರಟಿದ್ದ 18 ಮಂದಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ದೆಹಲಿ ರೈಲು ನಿಲ್ದಾಣ ತುಂಬಿ ತುಳುಕುತ್ತಿತ್ತು. ಅದಕ್ಕಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು.

ಆದರೆ ರೈಲು ಕೊಂಚ ತಡವಾಗಿ ನಿಲ್ದಾಣವನ್ನು ತಲುಪಿದವು. ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣದಲ್ಲಿ ಒಮ್ಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಯಿತು.

ಇದೇ ವೇಳೆ ಪ್ರಯಾಗ್‌ರಾಜ್‌ಗೆ ಹೊರಟಿದ್ದ ವಿಶೇಷ ರೈಲು ಫ್ಲಾಟ್‌ ಫಾರ್ಮ್‌ಗೆ ಆಗಮಿಸಿದೆ. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿಗೆ ನುಗ್ಗಿದ್ದಾರೆ. ಹೀಗಾಗಿ ಈ ಘಟನೆ ಸಂಭವಿಸಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ನೀಡಿ ತನಿಖೆಗೆ ಆದೇಶ ನೀಡಿದ್ದಾರೆ. ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

10 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

3 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

3 hours ago