Stampede at Haridwar
ಡೆಹ್ರಡೂನ್ : ಹರಿದ್ವಾರದ ಮಾನಸಾದೇವಿ ದೇವಸ್ಥಾನದ ಮೆಟ್ಟಿಲು ಮಾರ್ಗದಲ್ಲಿ ಭಾರೀ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಈ ಘಟನೆ ಜನರಲ್ಲಿ ಹಠಾತ್ ಅವ್ಯವಸ್ಥೆ ಮತ್ತು ಭೀತಿಯನ್ನು ಉಂಟುಮಾಡಿದೆ. ಇತ್ತೀಚೆಗೆ ಪುರಿ ಜಗನ್ನಾಥ ರಥ ಯಾತ್ರೆಯ ವೇಳೆ ಕಾಳ್ತುಳಿತ ಉಂಟಾಗಿ ಮೂವರು ಗಾಯಗೊಂಡು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ. ಮುಖ್ಯ ದೇವಸ್ಥಾನಕ್ಕೆ ಹೋಗುವ ದೇವಸ್ಥಾನದ ರಸ್ತೆಯಲ್ಲಿರುವ ಮೆಟ್ಟಿಲುಗಳ ಮೇಲೆ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲವಾದರೂ, ಪವಿತ್ರ ಶ್ರಾವಣ ಋತುವಿನ ಕಾರಣ ದೇವಾಲಯದಲ್ಲಿ ಭಾರೀ ಜನಸಮೂಹ ಜಮಾಯಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.
ಮೂಲಗಳ ಪ್ರಕಾರ ಈ ಪ್ರದೇಶದಲ್ಲಿ ವಿದ್ಯುತ್ ಆಘಾತದಿಂದ ಕಾಲ್ತುಳಿತ ಸಂಭವಿಸಿರಬಹುದು, ಇದರಿಂದಾಗಿ ಭಕ್ತರಲ್ಲಿ ಹಠಾತ್ ಗೊಂದಲ ಮತ್ತು ಭೀತಿ ಉಂಟಾಗಿದೆ ಎಂದು ಶಂಕಿಸಲಾಗಿದೆ.
ವಿದ್ಯುದಾಘಾತ: ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆಗೆ ವಿದ್ಯುತ್ ಆಘಾತ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಅಧಿಕಾರಿಗಳು ಸಂತ್ರಸ್ತರನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಸಂಭವನೀಯ ವಿದ್ಯುದಾಘಾತದ ಕಾರಣವನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.
ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಹರಿದ್ವಾರದ ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತದ ಸುದ್ದಿ ಅತ್ಯಂತ ದುಃಖಕರವಾಗಿದೆ. ಎಸ್ಡಿಆರೆಫ್, ಸ್ಥಳೀಯ ಪೊಲೀಸ್ ಮತ್ತು ಇತರ ರಕ್ಷಣಾ ತಂಡಗಳು ಸ್ಥಳದಲ್ಲಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗಿವೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…