ದೇಶ- ವಿದೇಶ

ಹರಿದ್ವಾರದ ದೇವಸ್ಥಾನದಲ್ಲಿ ಕಾಲ್ತುಳಿತ: 6 ಮಂದಿ ಸಾವು, 25ಕ್ಕೂ ಹೆಚ್ಚು ಮಂದಿ ಗಂಭೀರ

ಡೆಹ್ರಡೂನ್ : ಹರಿದ್ವಾರದ ಮಾನಸಾದೇವಿ ದೇವಸ್ಥಾನದ ಮೆಟ್ಟಿಲು ಮಾರ್ಗದಲ್ಲಿ ಭಾರೀ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ.

ಈ ಘಟನೆ ಜನರಲ್ಲಿ ಹಠಾತ್ ಅವ್ಯವಸ್ಥೆ ಮತ್ತು ಭೀತಿಯನ್ನು ಉಂಟುಮಾಡಿದೆ. ಇತ್ತೀಚೆಗೆ ಪುರಿ ಜಗನ್ನಾಥ ರಥ ಯಾತ್ರೆಯ ವೇಳೆ ಕಾಳ್ತುಳಿತ ಉಂಟಾಗಿ ಮೂವರು ಗಾಯಗೊಂಡು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ. ಮುಖ್ಯ ದೇವಸ್ಥಾನಕ್ಕೆ ಹೋಗುವ ದೇವಸ್ಥಾನದ ರಸ್ತೆಯಲ್ಲಿರುವ ಮೆಟ್ಟಿಲುಗಳ ಮೇಲೆ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲವಾದರೂ, ಪವಿತ್ರ ಶ್ರಾವಣ ಋತುವಿನ ಕಾರಣ ದೇವಾಲಯದಲ್ಲಿ ಭಾರೀ ಜನಸಮೂಹ ಜಮಾಯಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.

ಮೂಲಗಳ ಪ್ರಕಾರ ಈ ಪ್ರದೇಶದಲ್ಲಿ ವಿದ್ಯುತ್ ಆಘಾತದಿಂದ ಕಾಲ್ತುಳಿತ ಸಂಭವಿಸಿರಬಹುದು, ಇದರಿಂದಾಗಿ ಭಕ್ತರಲ್ಲಿ ಹಠಾತ್ ಗೊಂದಲ ಮತ್ತು ಭೀತಿ ಉಂಟಾಗಿದೆ ಎಂದು ಶಂಕಿಸಲಾಗಿದೆ.

ವಿದ್ಯುದಾಘಾತ: ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆಗೆ ವಿದ್ಯುತ್ ಆಘಾತ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಅಧಿಕಾರಿಗಳು ಸಂತ್ರಸ್ತರನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಸಂಭವನೀಯ ವಿದ್ಯುದಾಘಾತದ ಕಾರಣವನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಹರಿದ್ವಾರದ ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತದ ಸುದ್ದಿ ಅತ್ಯಂತ ದುಃಖಕರವಾಗಿದೆ. ಎಸ್‌ಡಿಆರೆಫ್, ಸ್ಥಳೀಯ ಪೊಲೀಸ್ ಮತ್ತು ಇತರ ರಕ್ಷಣಾ ತಂಡಗಳು ಸ್ಥಳದಲ್ಲಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago