ದೇಶ- ವಿದೇಶ

ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ : ಸಾವಿನ ಸಂಖ್ಯೆ 36ಕ್ಕೇ ಹೇರಿಕೆ

ಕರೂರು : ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ‍್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ. ಜನಸಮೂಹ ಇದ್ದಕ್ಕಿದ್ದಂತೆ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದ್ದು ಮೂವರು ಮಕ್ಕಳು ಸೇರಿದಂತೆ ಸುಮಾರು 31ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಸಾವಿನ ಸಂಖ್ಯೆ ಹೇರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಿಗದಿತ ಸಮಯಕ್ಕಿಂತ 7 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ಇನ್ನು ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರೂ ಸಂಖ್ಯೆಯಲ್ಲಿ ಜನ ನುಗ್ಗಲು ಪ್ರಾರಂಭಿಸಿದರು. ಈ ವೇಳೆ ಜನಸಂದಣಿ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ.

ಇದನ್ನೂ ಓದಿ:-ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ ದುರಂತಕ್ಕೆ ಮೋದಿ ಸಂತಾಪ : ಕರೂರಿಗೆ ಸ್ಟಾಲಿನ್‌ ಭೇಟಿ ಸಾಧ್ಯತೆ

ಕಾಲ್ತುಳಿತದ ವೇಳೆ ಹಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಹಲವು ಮಕ್ಕಳು ಕಾಣೆಯಾಗಿವೆ ಎಂದು ವರದಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ವಿಜಯ್ ತಕ್ಷಣ ತಮ್ಮ ಭಾಷಣವನ್ನು ನಿಲ್ಲಿಸಿ ಕಾರ್ಯಕರ್ತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವಂತೆ ಕೇಳಿಕೊಂಡರು.

ಕರೂರಿನಲ್ಲಿ ನಡೆದ ತಮ್ಮ ರ‍್ಯಾಲಿಯಲ್ಲಿ ಜನರು ಪ್ರಜ್ಞೆ ತಪ್ಪಿದಾಗ “ಪೊಲೀಸರೇ, ದಯವಿಟ್ಟು ಸಹಾಯ ಮಾಡಿ” ಎಂದು ವಿಜಯ್ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “ಯಾರೂ ಗಾಬರಿಯಾಗಬೇಡಿ, ಈಗ ಆ್ಯಂಬುಲೆನ್ಸ್ ಬರುತ್ತದೆ” ಎಂದು ಅವರು ಮೈಕ್​ನಲ್ಲಿ ಹೇಳಿದ್ದಾರೆ. ಈ ವೇಳೆ ಅರ್ಧಕ್ಕೆ ತಮ್ಮ ಭಾಷಣವನ್ನು ನಿಲ್ಲಿಸಿದ ವಿಜಯ್, ಉಸಿರಾಟದ ತೊಂದರೆ ಅನುಭವಿಸುತ್ತಿರುವ ಜನರಿಗೆ ನೀರು ವಿತರಿಸಲು ಮತ್ತು ಆಂಬ್ಯುಲೆನ್ಸ್ ಸೇವೆಗಳನ್ನು ಸಂಘಟಿಸಲು ಮುಂದಾದರು. ಅಗತ್ಯವಿರುವವರನ್ನು ತಲುಪಲು ತುರ್ತು ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಡುವಂತೆ ತಮ್ಮ ಬೆಂಬಲಿಗರನ್ನು ಅವರು ಒತ್ತಾಯಿಸಿದರು.

ಅಸ್ವಸ್ಥರಾಗಿರುವವರಿಗೆ ಸಹಾಯ ಮಾಡಲು ನೀರಿನ ಬಾಟಲಿಗಳನ್ನು ವಿತರಿಸಲಾಯಿತು ಮತ್ತು ವೈದ್ಯಕೀಯ ತಂಡಗಳನ್ನು ತಕ್ಷಣವೇ ನಿಯೋಜಿಸಲಾಯಿತು. ಪ್ರಜ್ಞೆ ತಪ್ಪಿದ ಹಲವಾರು ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಯಿತು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago