ದೇಶ- ವಿದೇಶ

ಕಾಲ್ತುಳಿತ ದುರಂತ | ನಟ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ

ಚೆನ್ನೈ : ತಮಿಳುನಾಡು ರಾಜ್ಯದಲ್ಲಿ ಭೀಕರ ಘಟನೆಗೆ ಕಾರಣವಾಗಿರುವ ಕರೂರು ಕಾಲ್ತುಳಿತ ಪ್ರಕರಣಕ್ಕೆ ಕಾರಣೀಭೂತರೆನ್ನಲಾದ ಚಿತ್ರನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ ಕೇಳಿ ಬರುತ್ತಿದೆ.

ಕಾಲ್ತುಳಿತಕ್ಕೆ ನಟ ವಿಜಯ್‌ ಅವರೇ ಕಾರಣ ಎಂದು ಆರೋಪಿಸಿರುವ ಡಿಎಂಕೆ ನಾಯಕರು ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ ರಾತ್ರಿಯೇ ತುರ್ತಾಗಿ ಕರೂರ್‌ಗೆ ಆಗಮಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದು ಎಂದಿಗೂ ಮರುಕಳಿಸಬಾರದು ಎಂದು ಭಾವುಕರಾಗಿದ್ದಾರೆ.

ವಿಜಯ್‌ ಅವರನ್ನು ಬಂಧಿಸುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನಾನು ನಿಮ ಪ್ರಶ್ನೆಗೆ ರಾಜಕೀಯವಾಗಿ ಉತ್ತರಿಸಲು ಸಾಧ್ಯವಿಲ್ಲ. ಇಷ್ಟು ಜನರ ಸಾವು ನನ್ನನ್ನು ಕುಗ್ಗಿಸಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಈ ಪ್ರಕರಣದ ತನಿಖೆಗೆ ನಿವೃತ್ತ ಹೈಕೋರ್ಟ್‌ ನ್ಯಾಯಾಧೀಶರಾದ ಅರುಣಾ ಜಗತೀಸನ್‌ ನೇತೃತ್ವದ ಏಕವ್ಯಕ್ತಿ ಆಯೋಗ ರಚಿಸಲಾಗಿದೆ. ಆಯೋಗದ ವರದಿ ಆಧರಿಸಿ ಸಂಭಾವ್ಯ ಬಂಧನ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:-ನಟ ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ

ಟಿವಿಕೆ ಕಾರ್ಯಕ್ರಮದ ಆಯೋಜಕರು ಕೇವಲ 10000 ಜನರು ರ್ಯಾಲಿಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದ್ದರು, ಆದರೆ 50,000 ರಿಂದ 1 ಲಕ್ಷಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ. ತಮಿಳುನಾಡು ಪೊಲೀಸರು ವಿಧಿಸಿದ ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಜೀವಗಳಿಗೆ ಅಪಾಯವನ್ನುಂಟು ಮಾಡಲಾಗಿದೆ.

ಕಳೆದುಹೋದ ಪ್ರತಿಯೊಂದು ಜೀವಕ್ಕೂ ವಿಜಯ್‌ ಜವಾಬ್ದಾರನಾಗಿರುತ್ತಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಡಿಎಂಕೆ ವಕ್ತಾರ ಐಟಿ ವಿಭಾಗದ ಕಾರ್ಯದರ್ಶಿ ಸೇಲಂ ಧರಣಿಧರನ್‌ ಟ್ವಿಟರ್‌ ವೀಡಿಯೊದಲಿ ಒತ್ತಾಯಿಸಿದ್ದಾರೆ. ಎಫ್‌ಐ ಆರ್‌ ದಾಖಲು: ಏತನಧ್ಯೆ, ಕರೂರು ಪಟ್ಟಣ ಪೊಲೀಸರು ಟಿವಿಕೆ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್‌ ಸೇರಿದಂತೆ ಹಲವರ ವಿರುದ್ಧ ಬಿಎನ್‌ಎಸ್‌‍ನ ಸೆಕ್ಷನ್‌ 109, 110, 125ಬಿ, 223ರಡಿ ಎಫ್‌ಐಆರ್‌ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌) ಸೆಕ್ಷನ್‌ 109 ಮತ್ತು 110 ಕ್ರಮವಾಗಿ ಕೊಲೆ ಯತ್ನ ಮತ್ತು ಅಪರಾಧಿಕ ನರಹತ್ಯೆಗೆ ಯತ್ನಿಸುವ ಪ್ರಕರಣಗಳಾಗಿವೆ. ಸೆಕ್ಷನ್‌ 125 ದುಡುಕಿನ ಅಥವಾ ನಿರ್ಲಕ್ಷ್ಯದ ವರ್ತನೆಯ ಮೂಲಕ ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಉಲ್ಲೇಖಿಸುತ್ತದೆ. ಸೆಕ್ಷನ್‌ 223 ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶವನ್ನು ಪಾಲಿಸದಿದ್ದಕ್ಕೆ ಸಂಬಂಧಿಸಿದ್ದಾಗಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

12 seconds ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

34 mins ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

41 mins ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

57 mins ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

2 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

2 hours ago