ದೇಶ- ವಿದೇಶ

ಕಾಲ್ತುಳಿತ ದುರಂತ | ನಟ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ

ಚೆನ್ನೈ : ತಮಿಳುನಾಡು ರಾಜ್ಯದಲ್ಲಿ ಭೀಕರ ಘಟನೆಗೆ ಕಾರಣವಾಗಿರುವ ಕರೂರು ಕಾಲ್ತುಳಿತ ಪ್ರಕರಣಕ್ಕೆ ಕಾರಣೀಭೂತರೆನ್ನಲಾದ ಚಿತ್ರನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ ಕೇಳಿ ಬರುತ್ತಿದೆ.

ಕಾಲ್ತುಳಿತಕ್ಕೆ ನಟ ವಿಜಯ್‌ ಅವರೇ ಕಾರಣ ಎಂದು ಆರೋಪಿಸಿರುವ ಡಿಎಂಕೆ ನಾಯಕರು ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ ರಾತ್ರಿಯೇ ತುರ್ತಾಗಿ ಕರೂರ್‌ಗೆ ಆಗಮಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದು ಎಂದಿಗೂ ಮರುಕಳಿಸಬಾರದು ಎಂದು ಭಾವುಕರಾಗಿದ್ದಾರೆ.

ವಿಜಯ್‌ ಅವರನ್ನು ಬಂಧಿಸುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನಾನು ನಿಮ ಪ್ರಶ್ನೆಗೆ ರಾಜಕೀಯವಾಗಿ ಉತ್ತರಿಸಲು ಸಾಧ್ಯವಿಲ್ಲ. ಇಷ್ಟು ಜನರ ಸಾವು ನನ್ನನ್ನು ಕುಗ್ಗಿಸಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಈ ಪ್ರಕರಣದ ತನಿಖೆಗೆ ನಿವೃತ್ತ ಹೈಕೋರ್ಟ್‌ ನ್ಯಾಯಾಧೀಶರಾದ ಅರುಣಾ ಜಗತೀಸನ್‌ ನೇತೃತ್ವದ ಏಕವ್ಯಕ್ತಿ ಆಯೋಗ ರಚಿಸಲಾಗಿದೆ. ಆಯೋಗದ ವರದಿ ಆಧರಿಸಿ ಸಂಭಾವ್ಯ ಬಂಧನ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:-ನಟ ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ

ಟಿವಿಕೆ ಕಾರ್ಯಕ್ರಮದ ಆಯೋಜಕರು ಕೇವಲ 10000 ಜನರು ರ್ಯಾಲಿಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದ್ದರು, ಆದರೆ 50,000 ರಿಂದ 1 ಲಕ್ಷಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ. ತಮಿಳುನಾಡು ಪೊಲೀಸರು ವಿಧಿಸಿದ ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಜೀವಗಳಿಗೆ ಅಪಾಯವನ್ನುಂಟು ಮಾಡಲಾಗಿದೆ.

ಕಳೆದುಹೋದ ಪ್ರತಿಯೊಂದು ಜೀವಕ್ಕೂ ವಿಜಯ್‌ ಜವಾಬ್ದಾರನಾಗಿರುತ್ತಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಡಿಎಂಕೆ ವಕ್ತಾರ ಐಟಿ ವಿಭಾಗದ ಕಾರ್ಯದರ್ಶಿ ಸೇಲಂ ಧರಣಿಧರನ್‌ ಟ್ವಿಟರ್‌ ವೀಡಿಯೊದಲಿ ಒತ್ತಾಯಿಸಿದ್ದಾರೆ. ಎಫ್‌ಐ ಆರ್‌ ದಾಖಲು: ಏತನಧ್ಯೆ, ಕರೂರು ಪಟ್ಟಣ ಪೊಲೀಸರು ಟಿವಿಕೆ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್‌ ಸೇರಿದಂತೆ ಹಲವರ ವಿರುದ್ಧ ಬಿಎನ್‌ಎಸ್‌‍ನ ಸೆಕ್ಷನ್‌ 109, 110, 125ಬಿ, 223ರಡಿ ಎಫ್‌ಐಆರ್‌ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌) ಸೆಕ್ಷನ್‌ 109 ಮತ್ತು 110 ಕ್ರಮವಾಗಿ ಕೊಲೆ ಯತ್ನ ಮತ್ತು ಅಪರಾಧಿಕ ನರಹತ್ಯೆಗೆ ಯತ್ನಿಸುವ ಪ್ರಕರಣಗಳಾಗಿವೆ. ಸೆಕ್ಷನ್‌ 125 ದುಡುಕಿನ ಅಥವಾ ನಿರ್ಲಕ್ಷ್ಯದ ವರ್ತನೆಯ ಮೂಲಕ ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಉಲ್ಲೇಖಿಸುತ್ತದೆ. ಸೆಕ್ಷನ್‌ 223 ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶವನ್ನು ಪಾಲಿಸದಿದ್ದಕ್ಕೆ ಸಂಬಂಧಿಸಿದ್ದಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

46 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

1 hour ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

1 hour ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago