ದೇಶ- ವಿದೇಶ

ಕಾಲ್ತುಳಿತ ದುರಂತ | ನಟ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ

ಚೆನ್ನೈ : ತಮಿಳುನಾಡು ರಾಜ್ಯದಲ್ಲಿ ಭೀಕರ ಘಟನೆಗೆ ಕಾರಣವಾಗಿರುವ ಕರೂರು ಕಾಲ್ತುಳಿತ ಪ್ರಕರಣಕ್ಕೆ ಕಾರಣೀಭೂತರೆನ್ನಲಾದ ಚಿತ್ರನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ ಕೇಳಿ ಬರುತ್ತಿದೆ.

ಕಾಲ್ತುಳಿತಕ್ಕೆ ನಟ ವಿಜಯ್‌ ಅವರೇ ಕಾರಣ ಎಂದು ಆರೋಪಿಸಿರುವ ಡಿಎಂಕೆ ನಾಯಕರು ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ ರಾತ್ರಿಯೇ ತುರ್ತಾಗಿ ಕರೂರ್‌ಗೆ ಆಗಮಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದು ಎಂದಿಗೂ ಮರುಕಳಿಸಬಾರದು ಎಂದು ಭಾವುಕರಾಗಿದ್ದಾರೆ.

ವಿಜಯ್‌ ಅವರನ್ನು ಬಂಧಿಸುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನಾನು ನಿಮ ಪ್ರಶ್ನೆಗೆ ರಾಜಕೀಯವಾಗಿ ಉತ್ತರಿಸಲು ಸಾಧ್ಯವಿಲ್ಲ. ಇಷ್ಟು ಜನರ ಸಾವು ನನ್ನನ್ನು ಕುಗ್ಗಿಸಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಈ ಪ್ರಕರಣದ ತನಿಖೆಗೆ ನಿವೃತ್ತ ಹೈಕೋರ್ಟ್‌ ನ್ಯಾಯಾಧೀಶರಾದ ಅರುಣಾ ಜಗತೀಸನ್‌ ನೇತೃತ್ವದ ಏಕವ್ಯಕ್ತಿ ಆಯೋಗ ರಚಿಸಲಾಗಿದೆ. ಆಯೋಗದ ವರದಿ ಆಧರಿಸಿ ಸಂಭಾವ್ಯ ಬಂಧನ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:-ನಟ ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ

ಟಿವಿಕೆ ಕಾರ್ಯಕ್ರಮದ ಆಯೋಜಕರು ಕೇವಲ 10000 ಜನರು ರ್ಯಾಲಿಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದ್ದರು, ಆದರೆ 50,000 ರಿಂದ 1 ಲಕ್ಷಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ. ತಮಿಳುನಾಡು ಪೊಲೀಸರು ವಿಧಿಸಿದ ಎಲ್ಲಾ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಜೀವಗಳಿಗೆ ಅಪಾಯವನ್ನುಂಟು ಮಾಡಲಾಗಿದೆ.

ಕಳೆದುಹೋದ ಪ್ರತಿಯೊಂದು ಜೀವಕ್ಕೂ ವಿಜಯ್‌ ಜವಾಬ್ದಾರನಾಗಿರುತ್ತಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಡಿಎಂಕೆ ವಕ್ತಾರ ಐಟಿ ವಿಭಾಗದ ಕಾರ್ಯದರ್ಶಿ ಸೇಲಂ ಧರಣಿಧರನ್‌ ಟ್ವಿಟರ್‌ ವೀಡಿಯೊದಲಿ ಒತ್ತಾಯಿಸಿದ್ದಾರೆ. ಎಫ್‌ಐ ಆರ್‌ ದಾಖಲು: ಏತನಧ್ಯೆ, ಕರೂರು ಪಟ್ಟಣ ಪೊಲೀಸರು ಟಿವಿಕೆ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್‌ ಸೇರಿದಂತೆ ಹಲವರ ವಿರುದ್ಧ ಬಿಎನ್‌ಎಸ್‌‍ನ ಸೆಕ್ಷನ್‌ 109, 110, 125ಬಿ, 223ರಡಿ ಎಫ್‌ಐಆರ್‌ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌) ಸೆಕ್ಷನ್‌ 109 ಮತ್ತು 110 ಕ್ರಮವಾಗಿ ಕೊಲೆ ಯತ್ನ ಮತ್ತು ಅಪರಾಧಿಕ ನರಹತ್ಯೆಗೆ ಯತ್ನಿಸುವ ಪ್ರಕರಣಗಳಾಗಿವೆ. ಸೆಕ್ಷನ್‌ 125 ದುಡುಕಿನ ಅಥವಾ ನಿರ್ಲಕ್ಷ್ಯದ ವರ್ತನೆಯ ಮೂಲಕ ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಉಲ್ಲೇಖಿಸುತ್ತದೆ. ಸೆಕ್ಷನ್‌ 223 ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶವನ್ನು ಪಾಲಿಸದಿದ್ದಕ್ಕೆ ಸಂಬಂಧಿಸಿದ್ದಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago