ದೇಶ- ವಿದೇಶ

ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧದ ಹೇಳಿಕೆ: ರಾಹುಲ್‌ ಗಾಂಧಿ ವಿರುದ್ಧ ಅಸ್ಸಾಂನಲ್ಲಿ ಎಫ್‌ಐಆರ್‌ ದಾಖಲು

ಗುವಾಹತಿ/ನವದೆಹಲಿ: ದೇಶದ ಪ್ರತಿಯೊಂದು ಸಂಘ-ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿದ ಸಂಸದ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ರಾಹುಲ್‌ ಗಾಂಧಿ ಅವರು ಜನವರಿ.15ರಂದು ಕಾಂಗ್ರೆಸ್‌ ಪಕ್ಷದ ಹೊಸ ಕಚೇರಿಯನ್ನು ದೆಹಲಿಯ ಕೋಟ್ಲ ರಸ್ತೆಯಲ್ಲಿ ಉದ್ಘಾಟನೆ ಮಾಡುವ ಸಂದರ್ಭದಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯೂ ದೇಶದಲ್ಲಿ ಎಲ್ಲಾ ಸಂಘ-ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಂಜೀತ್‌ ಚೇಟಿಯಾ ಎಂಬುವವರು ರಾಹುಲ್‌ ಗಾಂಧಿ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ್ವಯ ಅಸ್ಸಾಂ ರಾಜ್ಯದ ಗುವಾಹತಿಯ ಪಾನ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ. ಇನ್ನೂ ರಾಹುಲ್‌ ಗಾಂಧಿ ಅವರ ಹೇಳಿಕೆಯೂ ದೇಶದ ಸಾರ್ವಭೌಮತ್ವ, ಏಕತೆ ಹಾಗೂ ಸಮಗ್ರತೆಗೆ ಅಪಾಯ ತರುವಂತಹ ಹೇಳಿಕೆಯಾಗಿದೆ. ಹೀಗಾಗಿ ಅವರ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್‌ 152 ಮತ್ತು 197(1) ಅಡಿ ಅನ್ವಯ ಎಫ್‌ಐಆರ್‌ ದಾಖಲಿಸಿದ್ದಾರೆ. ಈ ವಿಧಿಯೂ ಜಾಮೀಮು ರಹಿತ ಅಪರಾಧಕ್ಕೆ ಸಂಬಂಧಿಸಿದ ವಿಧಿಯಾಗಿದೆ.

ದೂರಿನಲ್ಲಿ ಏನಿದೆ?

ರಾಹುಲ್‌ ಗಾಂಧಿ ಅವರು ಅಂದು ನೀಡಿರುವ ಹೇಳಿಕೆಯೂ ಸ್ವೀಕಾರಾರ್ಹ ಮುಕ್ತ ವಾಕ್‌ ಸ್ವಾತಂತ್ರ್ಯದ ಗಡಿಯನ್ನು ಮೀರಿದ್ದಾಗಿದೆ. ಅಲ್ಲದೇ ಸಾರ್ವಜನಿಕ ವ್ಯವಸ್ಥೆ ಹಾಗೂ ರಾಷ್ಟ್ರೀಯ ಭದ್ರತೆಗೆ ಅಪಾಯ ತರುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago