ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕನಾಗಿದ್ದ ಸ್ಟೀವ್ ಸ್ಮಿತ್ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ.
ದುಬೈನಲ್ಲಿ ಮಂಗಳವಾರ(ಮಾರ್ಚ್.4)ದಂದು ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ತಂಡವೂ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್ಗೆ ಆಯ್ಕೆಯಾಗಿದೆ.
ಈ ನಡುವೆ ಪಂದ್ಯದ ಮುಗಿದ ಮೇಲೆ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಅವರು ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ಸ್ಮಿತ್ ಟೆಸ್ಟ್ ಹಾಗೂ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ.
ಸ್ಮಿತ್ ಅವರು 2010 ರಲ್ಲಿ ಲೆಗ್ ಸ್ಪಿನ್ ಆಲ್ ರೌಂಡರ್ ಆಗಿ ವೆಸ್ಟ್ ಇಂಡೀಸ್ ವಿರುದ್ಧದ ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. ಅವರು ಇಲ್ಲಿಯವರೆಗೂ 170 ಏಕದಿನ ಪಂದ್ಯಗಳಲ್ಲಿ 43.28 ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. ಅಲ್ಲದೇ ಆ ಪಂದ್ಯಗಳಲ್ಲಿ 12 ಶತಕಗಳು, 35 ಅರ್ಧಶತಕಗಳು ಹಾಗೂ 28 ವಿಕೆಟ್ಗಳನ್ನು ಪಡೆದಿದ್ದಾರೆ.
ಇನ್ನು ಸ್ಮಿತ್ ಅವರು ಆಸ್ಟ್ರೇಲಿಯಾದ 2015 ಮತ್ತು 2023 ರ ಐಸಿಸಿ ವಿಶ್ವಕಪ್ ವಿಜೇತ ತಂಡಗಳ ಸದಸ್ಯರಾಗಿದ್ದರು. ಪ್ಯಾಟ್ ಕಮಿನ್ಸ್ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸ್ಟೀವ್ ಸ್ಮಿತ್ ಅವರನ್ನು ಆಸ್ಟ್ರೇಲಿಯಾ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.
ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು…
ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.18ಕ್ಕೆ ಬದಲಾಗಿ ಏಪ್ರಿಲ್.15ರಂದೇ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500…
ಮಡಿಕೇರಿ: ಫ್ರೆಂಡ್ಸ್ ಹುಲಿತಾಳ ಇವರ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾರ್ಚ್ 21,22,23ರಂದು ಮಡಿಕೇರಿಯ…
ಬೆಂಗಳೂರು: 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಈ…
ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ.…