ದೇಶ- ವಿದೇಶ

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ಪಂದ್ಯಕ್ಕೆ ಸ್ಟೀವ್‌ ಸ್ಮಿತ್‌ ವಿದಾಯ

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ನಾಯಕನಾಗಿದ್ದ ಸ್ಟೀವ್‌ ಸ್ಮಿತ್‌ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ.

ದುಬೈನಲ್ಲಿ ಮಂಗಳವಾರ(ಮಾರ್ಚ್‌.4)ದಂದು ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದ್ಲಿ ರೋಹಿತ್‌ ಶರ್ಮಾ ನೇತೃತ್ವದ ಟೀಂ ಇಂಡಿಯಾ ತಂಡವೂ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಆಯ್ಕೆಯಾಗಿದೆ.

ಈ ನಡುವೆ ಪಂದ್ಯದ ಮುಗಿದ ಮೇಲೆ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್‌ ಸ್ಮಿತ್‌ ಅವರು ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ಸ್ಮಿತ್‌ ಟೆಸ್ಟ್‌ ಹಾಗೂ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ.

ಸ್ಮಿತ್‌ ಅವರು 2010 ರಲ್ಲಿ ಲೆಗ್ ಸ್ಪಿನ್ ಆಲ್ ರೌಂಡರ್ ಆಗಿ ವೆಸ್ಟ್ ಇಂಡೀಸ್ ವಿರುದ್ಧದ ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. ಅವರು ಇಲ್ಲಿಯವರೆಗೂ 170 ಏಕದಿನ ಪಂದ್ಯಗಳಲ್ಲಿ 43.28 ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. ಅಲ್ಲದೇ ಆ ಪಂದ್ಯಗಳಲ್ಲಿ 12 ಶತಕಗಳು, 35 ಅರ್ಧಶತಕಗಳು ಹಾಗೂ 28 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇನ್ನು ಸ್ಮಿತ್‌ ಅವರು ಆಸ್ಟ್ರೇಲಿಯಾದ 2015 ಮತ್ತು 2023 ರ ಐಸಿಸಿ ವಿಶ್ವಕಪ್ ವಿಜೇತ ತಂಡಗಳ ಸದಸ್ಯರಾಗಿದ್ದರು. ಪ್ಯಾಟ್ ಕಮಿನ್ಸ್ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸ್ಟೀವ್ ಸ್ಮಿತ್ ಅವರನ್ನು ಆಸ್ಟ್ರೇಲಿಯಾ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

ಅರ್ಚನ ಎಸ್‌ ಎಸ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago