ದೇಶ- ವಿದೇಶ

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ ನಡೆಯುತ್ತಿದ್ದ ತೈಲ ಸಾಗಾಟ ನಿಂತುಹೋಗಿದೆ. ಹೀಗಾಗಿ ಜಾಗತಿಕ ತೈಲ ಬೆಲೆಗಳು ಸಹ ತುಸು ಏರಿಕೆ ಕಂಡಿವೆ.

ಈ ಸಮಸ್ಯೆ ಬಿಗಡಾಯಿಸುತ್ತಿದ್ದಂತೆ ಜಲಸಂಧಿಯ ಸುರಕ್ಷತೆ ಮತ್ತು ಸಮಸ್ಯೆಯನ್ನು ಪರಿಹರಿಸಲು ಹೊರ್ಮುಜ್‌ನತ್ತ ಯುದ್ಧನೌಕೆಗಳನ್ನು ಕಳುಹಿಸುವಂತೆ ಹಲವು ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒತ್ತಾಯಿಸಿದ್ದರು. ಆದರೆ ಕೆಲ ದೇಶಗಳು ಇದನ್ನು ನಿರಾಕರಿಸಿದ್ದು, ಟ್ರಂಪ್‌ಗೆ ಮತ್ತೆ ಹಿನ್ನಡೆಯಾಗಿದೆ.

ಟ್ರಂಪ್, ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ನಮ್ಮ ಮಿತ್ರ ರಾಷ್ಟ್ರಗಳು ತಮ್ಮ ಯುದ್ಧನೌಕೆಗಳನ್ನು ಕಳುಹಿಸಬೇಕು ಎಂದು ಮನವಿ ಮಾಡಿದ್ದರು. ಬಹುತೇಕ ಮಿತ್ರ ರಾಷ್ಟ್ರಗಳು ಈ ಮನವಿಯನ್ನು ತಿರಸ್ಕರಿಸಿದ್ದಾವೆ.

ನಾವು ಯುದ್ಧನೌಕೆಗಳನ್ನು ಕಳುಹಿಸುವುದಿಲ್ಲ ಎಂದು ಆಸ್ಟ್ರೇಲಿಯಾ ಸ್ಪಷ್ಟವಾಗಿ ಹೇಳಿದೆ. ಹೀಗೆ ಜಪಾನ್, ಜರ್ಮನಿ, ಫ್ರಾನ್ಸ್ ಬ್ರಿಟನ್, ಚೀನಾ, ಸ್ಪೇನ್, ಇಟಲಿ ದೇಶಗಳು ಸಾಮೂಹಿಕವಾಗಿ ಟ್ರಂಪ್ ಮನವಿಯನ್ನು ತಿರಸ್ಕರಿಸಿವೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago