ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು ಅವುಗಳ ಬೆಂಬಲ ದೇಶಗಳಿಗೆ ಮಾತ್ರ ನಿರ್ಬಂಧ ವಿಧಿಸಲಾಗಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ.
ಅಂತರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅರಾಘ್ಚಿ ಅವರು, “ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಲ್ಲ, ತೆರೆದಿದೆ. ನಮ್ಮ ಶತ್ರುಗಳು ಮತ್ತು ಅದರ ಬೆಂಬಲ ಮಿತ್ರ ರಾಷ್ಟ್ರಗಳಿಗೆ ಮಾತ್ರ ಮುಚ್ಚಲ್ಪಟ್ಟಿದೆ. ಇತರ ರಾಷ್ಟ್ರಗಳ ಹಡಗುಗಳು ಸುರಕ್ಷಿತವಾಗಿ ಸಾಗಣೆ ಮಾಡಬಹುದು ಎಂದು ಘೋಷಿಸಿದ್ದಾರೆ.
ಇರಾನ್ ಯುದ್ಧ ವಿರಾಮಕ್ಕೆ ಕೋರಿಲ್ಲ, ಯುದ್ಧ ನಿರ್ಣಾಯಕ ಅಂತ್ಯ ಬಯಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.
ಯುದ್ಧದಲ್ಲಿ ಭಾಗವಹಿಸದ ರಾಷ್ಟ್ರಗಳು ಇರಾನ್ ಅನುಮತಿಯೊಂದಿಗೆ ಜಲಸಂಧಿಯನ್ನು ಬಳಸಬಹುದು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಈ ಹೇಳಿಕೆಯು ಭಾರತಕ್ಕೆ ಸಕಾರಾತ್ಮಕ ಸೂಚನೆಯಾಗಿದ್ದು, ಇರಾನ್-ಅಮೆರಿಕ ಸಂಘರ್ಷ ತೀವ್ರಗೊಂಡ ನಂತರ ಹೊರ್ಮುಜ್ ಮೂಲಕ ಸಾಗಣೆ ತೀವ್ರವಾಗಿ ಕಡಿಮೆಯಾಗಿತ್ತು. ಆದರೆ ಭಾರತದ ಶಿವಾಲಿಕ್ ಟ್ಯಾಂಕರ್ ಇಂದು ಗುಜರಾತ್ನ ಮುಂದ್ರಾ ಪೋರ್ಟ್ಗೆ ಬಂದು ಸೇರಿದೆ. ನಾಳೆ ನಂದಾದೇವಿ ಕಾಂಡ್ಲಾಗೆ ತಲುಪುವ ನಿರೀಕ್ಷೆಯಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…