ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು ಅವುಗಳ ಬೆಂಬಲ ದೇಶಗಳಿಗೆ ಮಾತ್ರ ನಿರ್ಬಂಧ ವಿಧಿಸಲಾಗಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ.
ಅಂತರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅರಾಘ್ಚಿ ಅವರು, “ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಲ್ಲ, ತೆರೆದಿದೆ. ನಮ್ಮ ಶತ್ರುಗಳು ಮತ್ತು ಅದರ ಬೆಂಬಲ ಮಿತ್ರ ರಾಷ್ಟ್ರಗಳಿಗೆ ಮಾತ್ರ ಮುಚ್ಚಲ್ಪಟ್ಟಿದೆ. ಇತರ ರಾಷ್ಟ್ರಗಳ ಹಡಗುಗಳು ಸುರಕ್ಷಿತವಾಗಿ ಸಾಗಣೆ ಮಾಡಬಹುದು ಎಂದು ಘೋಷಿಸಿದ್ದಾರೆ.
ಇರಾನ್ ಯುದ್ಧ ವಿರಾಮಕ್ಕೆ ಕೋರಿಲ್ಲ, ಯುದ್ಧ ನಿರ್ಣಾಯಕ ಅಂತ್ಯ ಬಯಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.
ಯುದ್ಧದಲ್ಲಿ ಭಾಗವಹಿಸದ ರಾಷ್ಟ್ರಗಳು ಇರಾನ್ ಅನುಮತಿಯೊಂದಿಗೆ ಜಲಸಂಧಿಯನ್ನು ಬಳಸಬಹುದು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಈ ಹೇಳಿಕೆಯು ಭಾರತಕ್ಕೆ ಸಕಾರಾತ್ಮಕ ಸೂಚನೆಯಾಗಿದ್ದು, ಇರಾನ್-ಅಮೆರಿಕ ಸಂಘರ್ಷ ತೀವ್ರಗೊಂಡ ನಂತರ ಹೊರ್ಮುಜ್ ಮೂಲಕ ಸಾಗಣೆ ತೀವ್ರವಾಗಿ ಕಡಿಮೆಯಾಗಿತ್ತು. ಆದರೆ ಭಾರತದ ಶಿವಾಲಿಕ್ ಟ್ಯಾಂಕರ್ ಇಂದು ಗುಜರಾತ್ನ ಮುಂದ್ರಾ ಪೋರ್ಟ್ಗೆ ಬಂದು ಸೇರಿದೆ. ನಾಳೆ ನಂದಾದೇವಿ ಕಾಂಡ್ಲಾಗೆ ತಲುಪುವ ನಿರೀಕ್ಷೆಯಿದೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…