ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ನಡುವೆ ತಮಿಳುನಾಡು ಸಿಎಂ ಸ್ಟಾಲಿನ್ ಮಸೂದೆಯ ಪ್ರತಿ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಕ್ಷೇತ್ರ ಮರುವಿಂಗಡಣೆ ಮಸೂದೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಕಪ್ಪು ಬಟ್ಟೆ ಧರಿಸಿ ಕಪ್ಪು ಧ್ವಜ ಹಾರಿಸಿ ಪ್ರತಿಭಟಿಸಿದರು. ಬಳಿಕ ಕೇಂದ್ರದ ಪ್ರಸ್ತಾವಿತ ಮಸೂದೆ ಪ್ರತಿಯನ್ನು ಸುಟ್ಟು ಹಾಕಿದರು. ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ ಸ್ಟಾಲಿನ್ ಇದು ಕರಾಳ ಕಾನೂನು ಎಂದು ಕರೆದು ಕಪ್ಪು ಬಾವುಟ ಹಾರಿಸಲು ಕರೆ ನೀಡಿದರು.





