ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ ನಡುಗಿಸಿದೆ. ಈ ಪ್ರಬಲ ಕಂಪನದ ಬೆನ್ನಲ್ಲೇ ಜಪಾನ್ ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆಯನ್ನು ಕೊಟ್ಟಿದೆ. ಸುಮಾರು ಮೂರು ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಯುಎಸ್ಜಿಎಸ್ ಮಾಹಿತಿಯ ಪ್ರಕಾರ, ಭೂಕಂಪದ ತೀವ್ರತೆಯಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಸುಮಾರು ೩ ಮೀಟರ್ (೧೦ ಅಡಿ) ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ.
ಇದನ್ನು ಓದಿ: ಕೆ.ಆರ್.ಪೇಟೆ | ರೈತನ ಮೇಲೆ ಚಿರತೆ ದಾಳಿ ; ಪ್ರಾಣಾಪಾಯದಿಂದ ಪಾರು
೧೧:೧೫ ರ ಸುಮಾರಿಗೆ ಭೂಕಂಪನ
ಜಪಾನ್ನ ಉತ್ತರ ಮತ್ತು ಪೂರ್ವ ಭಾಗದ ಕರಾವಳಿ ಪ್ರದೇಶದಲ್ಲಿ ಸ್ಥಳೀಯ ಕಾಲಮಾನ ರಾತ್ರಿ ೧೧:೧೫ ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ಈ ಹಿನ್ನೆಲೆ, ಹೊಕ್ಕೆ ಡೊ, ಅಯೋಮೊರಿ ಮತ್ತು ಇವಾಟೆ ಪ್ರಿಫೆಕ್ಚರ್ಗಳಿಗೆ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಭೂಕಂಪದ ತೀವ್ರತೆಗೆ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಭೂಕಂಪನದ ತೀವ್ರತೆ ಎಷ್ಟಿದೆ ಎನ್ನುವುದು ಕಂಡುಬಂದಿದೆ. ಎರೆಡರಡು ಭಾಗದಲ್ಲಿ ಸಂಭವಿಸಿದ ಕಂಪನದಿಂದ ದೀಪಗಳು, ವಾಹನಗಳು, ಬೆಂಚು ಕುರ್ಚಿಗಳು ಮನೆಯಲ್ಲಿನ ಅಮೂಲ್ಯ ವಸ್ತುಗಳು ಜೋರಾಗಿ ಅಲುಗಾಡುವುದು ಕಂಡುಬಂದಿದೆ. ಜೊತೆಗೆ ಸ್ಥಳೀಯ ಜನರು ಕಿರುಚಾಡುವುದು ವಿಡಿಯೋದಲ್ಲಿ. ಈ ಬಗ್ಗೆ ವ್ಯಕ್ತಿಯೊಬ್ಬರು ವಿದೇಶಿ ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದು, ಭೂಕಂಪವು ಒಂದು ನಿಮಿಷಕ್ಕೂ ಹೆಚ್ಚು ಕಾಲ ಮುಂದುವರಿಯಿತು ಎಂದು ಹೇಳಿದ್ದಾರೆ.
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…