ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ ನಡುಗಿಸಿದೆ. ಈ ಪ್ರಬಲ ಕಂಪನದ ಬೆನ್ನಲ್ಲೇ ಜಪಾನ್ ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆಯನ್ನು ಕೊಟ್ಟಿದೆ. ಸುಮಾರು ಮೂರು ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಯುಎಸ್ಜಿಎಸ್ ಮಾಹಿತಿಯ ಪ್ರಕಾರ, ಭೂಕಂಪದ ತೀವ್ರತೆಯಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಸುಮಾರು ೩ ಮೀಟರ್ (೧೦ ಅಡಿ) ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಲಾಗಿದೆ.
ಇದನ್ನು ಓದಿ: ಕೆ.ಆರ್.ಪೇಟೆ | ರೈತನ ಮೇಲೆ ಚಿರತೆ ದಾಳಿ ; ಪ್ರಾಣಾಪಾಯದಿಂದ ಪಾರು
೧೧:೧೫ ರ ಸುಮಾರಿಗೆ ಭೂಕಂಪನ
ಜಪಾನ್ನ ಉತ್ತರ ಮತ್ತು ಪೂರ್ವ ಭಾಗದ ಕರಾವಳಿ ಪ್ರದೇಶದಲ್ಲಿ ಸ್ಥಳೀಯ ಕಾಲಮಾನ ರಾತ್ರಿ ೧೧:೧೫ ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ಈ ಹಿನ್ನೆಲೆ, ಹೊಕ್ಕೆ ಡೊ, ಅಯೋಮೊರಿ ಮತ್ತು ಇವಾಟೆ ಪ್ರಿಫೆಕ್ಚರ್ಗಳಿಗೆ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಭೂಕಂಪದ ತೀವ್ರತೆಗೆ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಭೂಕಂಪನದ ತೀವ್ರತೆ ಎಷ್ಟಿದೆ ಎನ್ನುವುದು ಕಂಡುಬಂದಿದೆ. ಎರೆಡರಡು ಭಾಗದಲ್ಲಿ ಸಂಭವಿಸಿದ ಕಂಪನದಿಂದ ದೀಪಗಳು, ವಾಹನಗಳು, ಬೆಂಚು ಕುರ್ಚಿಗಳು ಮನೆಯಲ್ಲಿನ ಅಮೂಲ್ಯ ವಸ್ತುಗಳು ಜೋರಾಗಿ ಅಲುಗಾಡುವುದು ಕಂಡುಬಂದಿದೆ. ಜೊತೆಗೆ ಸ್ಥಳೀಯ ಜನರು ಕಿರುಚಾಡುವುದು ವಿಡಿಯೋದಲ್ಲಿ. ಈ ಬಗ್ಗೆ ವ್ಯಕ್ತಿಯೊಬ್ಬರು ವಿದೇಶಿ ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದು, ಭೂಕಂಪವು ಒಂದು ನಿಮಿಷಕ್ಕೂ ಹೆಚ್ಚು ಕಾಲ ಮುಂದುವರಿಯಿತು ಎಂದು ಹೇಳಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…