Strong earthquake in Delhi: People shocked
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ ಜಜ್ಜರ್ನಿಂದ ಈಶಾನ್ಯಕ್ಕೆ 4 ಕಿ.ಮೀ ದೂರದಲ್ಲಿದ್ದು, 14 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ದಿಲ್ಲಿ, ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಗಳಲ್ಲಿ ಭೂಕಂಪದ ಅನುಭವವಾಗಿದೆ. ಹರಿಯಾಣದ ರೋಹ್ಟಕ್ನಲ್ಲೂ ಪರಿಣಾಮ ಎದುರಿಸಲಾಗಿದ್ದು, ರಸ್ತೆಗಳಲ್ಲಿ ವಾಹನಗಳು ಅಲುಗಾಡಿದ ಅನುಭವವಾಗಿದೆ.
ಹರಿಯಾಣದ ಜಿಂದ್ ಮತ್ತು ಬಹದ್ದೂರ್ಗಢ ಹೊರತುಪಡಿಸಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪ್ರದೇಶಗಳು ಸಹ 10 ಸೆಕೆಂಡುಗಳ ಕಾಲ ಕಂಪನವನ್ನು ಅನುಭವಿಸಿದವು. ಕಳೆದ ಆರು ತಿಂಗಳಲ್ಲಿ ದಿಲ್ಲಿ ಮತ್ತು ಎನ್ಸಿಆರ್ನಲ್ಲಿ ಇದು ಮೂರನೇ ಭೂಕಂಪವಾಗಿದೆ. ಇದಕ್ಕೂ ಮೊದಲು, ಏಪ್ರಿಲ್ 19 ಮತ್ತು ಫೆಬ್ರವರಿ 17 ರಂದು ಸಹ ಭೂಕಂಪಗಳು ಸಂಭವಿಸಿದ್ದವು.
ಭೂಕಂಪನದ ಜೊತೆಗೆ ದಿಲ್ಲಿ ಮತ್ತು ಎನ್ಸಿಆರ್ ನಲ್ಲಿ ಬುಧವಾರ ಸಂಜೆಯಿಂದ ಮಳೆಯಾಗುತ್ತಿದೆ. ಈ ಮಳೆ ಈ ಮಾನ್ಸೂನ್ನಲ್ಲಿ ಅತ್ಯಂತ ಹೆಚ್ಚಿನ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಈ ರಣಮಳೆ ಸುರಿದಿದೆ. ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…