Strong earthquake in Delhi: People shocked
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ ಜಜ್ಜರ್ನಿಂದ ಈಶಾನ್ಯಕ್ಕೆ 4 ಕಿ.ಮೀ ದೂರದಲ್ಲಿದ್ದು, 14 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ದಿಲ್ಲಿ, ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಗಳಲ್ಲಿ ಭೂಕಂಪದ ಅನುಭವವಾಗಿದೆ. ಹರಿಯಾಣದ ರೋಹ್ಟಕ್ನಲ್ಲೂ ಪರಿಣಾಮ ಎದುರಿಸಲಾಗಿದ್ದು, ರಸ್ತೆಗಳಲ್ಲಿ ವಾಹನಗಳು ಅಲುಗಾಡಿದ ಅನುಭವವಾಗಿದೆ.
ಹರಿಯಾಣದ ಜಿಂದ್ ಮತ್ತು ಬಹದ್ದೂರ್ಗಢ ಹೊರತುಪಡಿಸಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪ್ರದೇಶಗಳು ಸಹ 10 ಸೆಕೆಂಡುಗಳ ಕಾಲ ಕಂಪನವನ್ನು ಅನುಭವಿಸಿದವು. ಕಳೆದ ಆರು ತಿಂಗಳಲ್ಲಿ ದಿಲ್ಲಿ ಮತ್ತು ಎನ್ಸಿಆರ್ನಲ್ಲಿ ಇದು ಮೂರನೇ ಭೂಕಂಪವಾಗಿದೆ. ಇದಕ್ಕೂ ಮೊದಲು, ಏಪ್ರಿಲ್ 19 ಮತ್ತು ಫೆಬ್ರವರಿ 17 ರಂದು ಸಹ ಭೂಕಂಪಗಳು ಸಂಭವಿಸಿದ್ದವು.
ಭೂಕಂಪನದ ಜೊತೆಗೆ ದಿಲ್ಲಿ ಮತ್ತು ಎನ್ಸಿಆರ್ ನಲ್ಲಿ ಬುಧವಾರ ಸಂಜೆಯಿಂದ ಮಳೆಯಾಗುತ್ತಿದೆ. ಈ ಮಳೆ ಈ ಮಾನ್ಸೂನ್ನಲ್ಲಿ ಅತ್ಯಂತ ಹೆಚ್ಚಿನ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಈ ರಣಮಳೆ ಸುರಿದಿದೆ. ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…