ಅಂಕಾರಾ: ಟರ್ಕಿ ಮತ್ತು ಸಿರಿಯಾದಲ್ಲಿ ಪ್ರಕೃತಿ ತಾಂಡವವಾಡಿದೆ. ಇಂದು ಮುಂಜಾನೆ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಉಭಯ ರಾಷ್ಟ್ರಗಳು ತತ್ತರಿಸಿ ಹೋಗಿವೆ. 7.8 ತೀವ್ರತೆಯ ಭೂಕಂಪನದಲ್ಲಿ 360 ಕ್ಕೂ ಅಧಿಕ ಜನರು ಈವರೆಗೂ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನೂರಾರು ಕಟ್ಟಡಗಳು ಧರಾಶಾಯಿಯಾಗಿದ್ದು, ಜನರು ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಭೀಕರ ದುರಂತದ ದೃಶ್ಯಟರ್ಕಿ, ಸಿರಿಯಾ ಮಾತ್ರವಲ್ಲದೇ, ಈಜಿಪ್ಟ್ನ ಕೈರೋದವರೆಗೂ ಭೂಕಂಪನ ಅನುಭವವಾಗಿದೆ. ಭೂಮಿ ನಡುಕದಿಂದ ದೊಡ್ಡ ದೊಡ್ಡ ಕಟ್ಟಡಗಳು ಉರುಳಿಬಿದ್ದಿವೆ. ಅದರಡಿ ಸಿಲುಕಿದ ಜನರು ಕೂಗಾಟ, ಚೀರಾಟ ಕರುಳು ಹಿಂಡುತ್ತಿದೆ. ಇನ್ನಷ್ಟು ಕಟ್ಟಡಗಳು ಅಪಾಯಕಾರಿ ಮಟ್ಟದಲ್ಲಿ ವಾಲಿಕೊಂಡಿದ್ದು, ಬೀಳುವ ಹಂತದಲ್ಲಿವೆ. ಸಿರಿಯಾದ ರಾಜಧಾನಿಯಿಂದ ಸುಮಾರು 90 ಕಿಲೋಮೀಟರ್ ದೂರವಿರುವ ಗಾಜಿಯಾಂಟೆಪ್ ನಗರದ ಉತ್ತರದಲ್ಲಿ ಭೂಕಂಪನದ ಅಲೆಗಳು ಎದ್ದಿವೆ.
ಭೂಕಂಪದಲ್ಲಿ ಉರುಳಿ ಬಿದ್ದ ಕಟ್ಟಡಗಳುಇದು ಸುತ್ತಲಿನ 30 ಕಿಮೀ ವ್ಯಾಪ್ತಿಯಲ್ಲಿ ನಡುಕ ಉಂಟು ಮಾಡಿದೆ. ಹಲವಾರು ನಗರಗಳ ಜೊತೆಗೆ ಸಿರಿಯಾ ಯುದ್ಧದಲ್ಲಿ ವಲಸೆ ಬಂದು ನೆಲೆಸಿರುವ ನಿರಾಶ್ರಿತ ಪ್ರದೇಶದಲ್ಲೂ ಪ್ರಕೃತಿ ಮುನಿಸಿಕೊಂಡು ವೈಪರೀತ್ಯ ಸೃಷ್ಟಿಸಿದೆ. ಸಿರಿಯಾದ ಗಡಿಯಲ್ಲಿರುವ ಟರ್ಕಿ ವಿಶ್ವದಲ್ಲೇ ಅತಿ ಹೆಚ್ಚು ಸಂಖ್ಯೆಯ ಸಿರಿಯನ್ ನಿರಾಶ್ರಿತರನ್ನು ಹೊಂದಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…